ಆನಂದ ಕಂದ-2023 ಪ್ರಶಸ್ತಿ ಪ್ರದಾನ ಸಮಾರಂಭ

ಧಾರವಾಡ :ಕರ್ನಾಟಕ ವಿದ್ಯಾವರ್ಧಕ ಸಂಘವು, ಕನ್ನಡ ಮತ್ತು ಮರಾಠಿ ಭಾಷಾ ಬಾಂಧವ್ಯ ಬಲಪಡಿಸಲೆಂದು ಡಾ. ಪಂಡಿತ ಅವಳೀಕರ ಅವರು ಕೊಡ ಮಾಡಿದ ದತ್ತಿ ಅಂಗವಾಗಿ ಏ. 16ರಂದು ಸಂಜೆ 6 ಗಂಟೆಗೆ ಸಂಘದ ರಾ. ಹ. ದೇಶಪಾಂಡೆ ಸಭಾಭವನದಲ್ಲಿ ಆನಂದ ಕಂದ-2023 ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಿದೆ.

ಪ್ರಶಸ್ತಿ ಪುರಸ್ಕೃತ ಬೆಳಗಾವಿಯ ಸಾಹಿತಿ ಶಿರೀಷ ಜೋಶಿ ಆನಂದ ಕಂದ ಪ್ರಶಸ್ತಿ ಸ್ವೀಕರಿಸುವರು.

ಮುಖ್ಯ ಅತಿಥಿಗಳಾಗಿ ಬೆಳಗಾವಿ ಡಾ.ಬೆಟಗೇರಿ ಕೃಷ್ಣಶರ್ಮ ಸ್ಮಾರಕಟ್ರಸ್ಟ್ನಅಧ್ಯಕ್ಷ ಡಾ.ರಾಘವೇಂದ್ರ ಪಾಟೀಲಆಗಮಿಸುವರು.

ಧಾರವಾಡ ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತಗುರಪ್ಪ ಬೆಲ್ಲದ ಅಧ್ಯಕ್ಷತೆ ವಹಿಸುವರು. 

ಡಾ. ಬೆಟಗೇರಿ ಕೃಷ್ಣಶರ್ಮ ಸ್ಮಾರಕ ಟ್ರಸ್ಟ್, ಬೆಳಗಾವಿ ಇವರ ಸಹಯೋಗದಲ್ಲಿ ಆನಂದ ಕಂದ ಗೆಳೆಯರ ಬಳಗ, ಧಾರವಾಡ ಇವರಿಂದ ಆನಂದಕಂದರ ಗೀತಗಾಯನ ನಡೆಸಿಕೊಡುವರು.

ಸಾಹಿತಿಗಳು, ಚಿಂತಕರು, ಕಲಾವಿದರು, ವಿದ್ಯಾರ್ಥಿಗಳು, ಮಹಿಳೆಯರು, ಆಸಕ್ತ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ಕೋರಿದ್ದಾರೆ