ಅನಂತಪೂರ-ಕೊಕಳಾ ರಸ್ತೆ ಡಾಂಬರೀಕರಣಕ್ಕೆ ಚಾಲನೆ
ಲೋಕದರ್ಶನ ವರದಿ
ಸಂಬರಗಿ 27: 50 ವರ್ಷದಿಂದ ರಸ್ತೆ ದುರಸ್ತಿ ನೆನೆಗುದಿಗೆ ಬಿದ್ದಿದ್ದ ಅನಂತಪೂರ-ಕೊಕಳಾ 3 ಕಿ.ಮೀ ರಸ್ತೆ ಡಾಂಬರೀಕರಣ ಕಾಮಗಾರಿ ಈ ಭಾಗದ ಕಾಂಗ್ರೆಸ್ ಜಿ.ಪಂ ಸದಸ್ಯೆ ಮಾದುರಿ ಶಿಂಧೆ ಹಾಗೂ ಕಾಂಗ್ರೆಸ್ ಮುಖಂಡ ದಾದಾ ಶಿಂಧೆ ಇವರ ಪ್ರಯತ್ನದಿಂದ ಪ್ರಾರಂಭವಾಗಿದೆ. ಇದರಿಂದ ಅತ್ಯಂತ ಕಷ್ಟ ಪಡುತ್ತಿದ್ದ ವಾಹನ ಸವಾರರಿಗೆ, ಪ್ರಯಾಣಿಕರಿಗೆ ಅನುಕೂಲವಾಗಿದೆ.
ಅನಂತಪೂರ-ಕೊಕಳಾ ರಸ್ತೆ ಗಡಿ ಭಾಗದಲ್ಲಿ ಇದ್ದು ಹಲವಾರು ಬಾರಿ ರಾಜಕೀಯ ಮುಖಂಡರ ಗಮನಕ್ಕೆ ತಂದರೂ ಸಹ ರಸ್ತೆಯಾಗಿರಲಿಲ್ಲ. ಅನಂತಪೂರ-ಕೊಕಳಾ ಮಾರ್ಗವಾಗಿ ಕವಟೆಮಹಾಂಕಾಳ ಮಹಾರಾಷ್ಟ್ರಕ್ಕೆ ಹೋಗಲು ರಸ್ತೆ ಅನುಕೂಲವಾಗಿದೆ. ಈ ಭಾಗದ ಜನರು ದಿನನಿತ್ಯ ತಮ್ಮ ಕೆಲಸಗಳಿಗಾಗಿ ಕವಟೆಮಹಾಂಕಾಳಕ್ಕೆ ಹೋಗುತ್ತಿದ್ದಾರೆ. ಕಾಡಾ ಯೋಜನೆಯಡಿಯಲ್ಲಿ ಒಂದು ಕೋಟಿ ರೂ. ಅನುದಾನ ಮಂಜೂರಾಗಿ ರಸ್ತೆ ಡಾಂಬರೀಕರಣದಿಂದ ಒಳ್ಳೆಯ ಗುಣಮಟ್ಟದಿಂದ ನಡೆಯುತ್ತಿದೆ.
ಮಾಜಿ ತಾ.ಪಂ ಸದಸ್ಯ ಮಹಾಂತೇಶ ಸಾಲಿಮಠ, ರುದ್ರಗೌಡಾ ಪಾಟೀಲ, ಹುಸೇನ ಅತ್ತಾರ, ಇವರ ಸತತ ಪ್ರಯತ್ನದಿಂದ ಗಡಿ ಭಾಗದ ರಸ್ತೆಗಳು ಡಾಂಬರೀಕರಣ ಆಗುತ್ತಿವೆ. ಅನಂತಪೂರ-ಯಕ್ಕುಂಡಿ ರಸ್ತೆಯನ್ನು ಶೀಘ್ರದಲ್ಲಿ ಡಾಂಬರೀಕರಣ ಮಾಡಲಾಗುವದೆಂದು ದಾದಾ ಶಿಂಧೆ ಹೇಳಿದರು.
ಫೋಟೋ ಶಿಷರ್ಿಕೆ: ಅನಂತಪೂರ-ಕೋಕಳಾ ರಸ್ತೆ ಡಾಂಬರೀಕರಣ ನಡೆಯುತಿರುವುದು
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 