ಅನನ್ಯಾ ಕುಲಕರ್ಣಿಗೆ ತೃತೀಯ ಸ್ಥಾನ.!

ಅನನ್ಯಾ ಕುಲಕರ್ಣಿಗೆ ತೃತೀಯ ಸ್ಥಾನ.! Ananya Kulkarni takes third place!


ಕಾಗವಾಡ 14 : ಪಟ್ಟಣದ ಶಿವಾನಂದ ಮಹಾವಿದ್ಯಾಲಯದ ಬಿಎ ದ್ವಿತೀಯ ಸೆಮಿಸ್ಟರನ ಅನನ್ಯಾ ಕುಲಕರ್ಣಿಗೆ ಬೆಳಗಾವಿಯಲ್ಲಿ ಕರ್ನಾಟಕ ಸರಕಾರದ ಬಸವರಾಜ ಕಟ್ಟೀಮನಿ ಪ್ರತಿಷ್ಠಾನ ದಿಂದ ದಿ.13 ರಂದು ನಡೆದ ಜಿಲ್ಲಾ ಮಟ್ಟದ ಕಥಿ ಹೇಳೂಣು ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದು ಕೊಂಡಿದ್ದಾಳೆ. ಅವಳಿಗೆ ಮಹಾವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎ.ಎಂ. ಜಕ್ಕಣ್ಣವರ ಮಾರ್ಗದರ್ಶನ ಮಾಡಿದ್ದರು. ವಿಜೇತ ವಿದ್ಯಾರ್ಥಿನಿಯನ್ನು ಮಹಾವಿದ್ಯಾಲಯದ ಆಡಳಿತ ಮಂಡಳಿ, ಪ್ರಾಚಾರ್ಯರು, ಸಿಬ್ಬಂದಿ ವರ್ಗ ಮತ್ತು ವಿದ್ಯಾರ್ಥಿಗಳು ಅಭಿನಂದಿಸಿದ್ದಾರೆ.