ಆಂಧ್ರ ಪ್ರದೇಶ: ಯುಗಾದಿ ಹಬ್ಬದಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ ಸುಳಿವು
Andhra Pradesh: Free bus travel for women from Ugadi festival
ಹೈದರಾಬಾದ್ 31: ಕಳೆದ ಮೇ ತಿಂಗಳಲ್ಲಿ ನಡೆದ ಆಂಧ್ರ ಪ್ರದೇಶದ ವಿಧಾನಸಭಾ ಚುನಾವಣೆಗೂ ಪೂರ್ವದಲ್ಲಿ ತೆಲುಗು ದೇಶಂ– ಜನ ಸೇನಾದ ಜಂಟಿ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ‘ಸೂಪರ್ ಸಿಕ್ಸ್’ ಭರವಸೆಗಳಲ್ಲಿ ಸರ್ಕಾರಿ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಯೋಜನೆಯೂ ಒಂದು.
ಮುಖ್ಯಮಂತ್ರಿಯು ಸಾರಿಗೆ ಇಲಾಖೆಯ ಅಧಿಕಾರಿಗಳೊಂದಿಗೆ ಸೋಮವಾರ ನಡೆಸಿದ ಸಭೆಯಲ್ಲಿ ಈ ವಿಷಯ ಪ್ರಸ್ತಾಪಗೊಂಡಿದೆ.
ಅಧಿಕಾರಕ್ಕೆ ಬಂದು ಆರು ತಿಂಗಳಾದರೂ ಯೋಜನೆ ಇನ್ನೂ ಜಾರಿಗೊಂಡಿಲ್ಲ. ಸಂಕ್ರಾಂತಿ ಹಬ್ಬದಿಂದ ಜಾರಿಗೊಳ್ಳಲಿದೆ ಎಂದು ನಿರೀಕ್ಷಿಸಿದ್ದ ಈ ಯೋಜನೆಯನ್ನು ಮತ್ತೆ ಮುಂದೂಡಲಾಗಿದೆ.
ಆಂಧ್ರ ಪ್ರದೇಶದ ಸರ್ಕಾರಿ ಬಸ್ಗಳಲ್ಲಿ ಯುಗಾದಿ ಹಬ್ಬದಿಂದ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡುವ ಸುಳಿವನ್ನು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ನೀಡಿದ್ದಾರೆ.
ಯೋಜನೆ ಅನುಷ್ಠಾನದ ಬಗ್ಗೆ ಅಧ್ಯಯನ ನಡೆಸಲಿಕ್ಕಾಗಿ ಎಪಿಆರ್ಟಿಸಿ ಅಧಿಕಾರಿಗಳು ವಿವಿಧ ರಾಜ್ಯಗಳಿಗೆ ಈಗಾಗಲೇ ಭೇಟಿ ನೀಡಿದ್ದಾರೆ. ಕ್ಯಾಬಿನೆಟ್ ಉಪಸಮಿತಿಯು ಸಹ ಜ. 2ರಂದು ಕರ್ನಾಟಕಕ್ಕೆ ಭೇಟಿ ನೀಡಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 