ಯುಗಾದಿ ಪಾಡ್ಯದಂದು ವಿಜೃಂಭಣೆಯಿಂದ ಆಂಜನೇಯ್ಯಸ್ವಾಮಿ ಮಹಾರಥೋತ್ಸವ
Anjaneya Swamy Maharathotsava celebrated with great pomp and show on Ugadi Padya
ಲೋಕದರ್ಶನ ವರದಿ
ಕಂಪ್ಲಿ 20: ತಾಲೂಕಿನ ದೇವಲಾಪುರ ಗ್ರಾಮದ ಸಾವಿರಾರು ಭಕ್ತರ ಆರಾಧ್ಯ ದೈವ ಶ್ರೀ ಆಂಜನೇಯ್ಯಸ್ವಾಮಿ ಮಹಾರಥೋತ್ಸವ ಅತ್ಯಂತ ವಿಜೃಂಭಣೆಯಿಂದ ಯುಗಾದಿ ಪಾಡ್ಯದ ದಿನವಾದ ಗುರುವಾರ ಸಂಜೆ ಜರುಗಿತು. ಗ್ರಾಮದ ಆಂಜನೇಯ ಸ್ವಾಮಿ ದೇವಸ್ಥಾನ ಬಳಿಯಿಂದ ಆರಂಭಗೊಂಡ ರಥೋತ್ಸವ ಗ್ರಾಮದ ಪ್ರಮುಖ ರಸ್ತೆಗಳ ಮುಖಾಂತರ ಎದುರು ಬಸವಣ್ಣವರೆಗೆ ಸಂಚರಿಸಿ ಪುನಃ ದೇವಸ್ಥಾನ ಬಳಿ ಬಂದು ಸಂಪನ್ನಗೊಂಡಿತು. ರಥೋತ್ಸವಕ್ಕೆ ಸಾವಿರಾರು ಸಂಖ್ಯೆಯ ಭಕ್ತಾದಿಗಳು ಬಾಳೆಹಣ್ಣು, ಉತ್ತುತ್ತಿ, ಬಿಲ್ವಪತ್ರೆ ಎಸೆಯುವ ಮೂಲಕ ಭಕ್ತಿ ಮೆರೆದರು.
ಈ ಮೆರವಣಿಗೆಯಲ್ಲಿ ಸುಮಂಗಲಿಯರ ಕಳಸ, ತಾಷಾರಾಂಡೋಲ್, ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾಪ್ರಕಾರಗಳು ಪಾಲ್ಗೊಂಡಿದ್ದವು. ರಥೋತ್ಸವ ಹಿನ್ನೆಲೆ ಗ್ರಾಮ ಹಾಗೂ ಸುತ್ತಮುತ್ತಲಿನ ಭಕ್ತರು ದೇವಸ್ಥಾನಕ್ಕೆ ಆಗಮಿಸಿ ಕಾಯಿ ಕರ್ೂರ ಅರ್ಿಸಿ ಭಕ್ತಿ ಮೆರೆದರು. ಈ ರಥೋತ್ಸವದಲ್ಲಿ ಆಂಜನೇಯ್ಯ ದೇವಸ್ಥಾನದ ಆಡಳಿತ ಮಂಡಳಿಯ ಸರ್ವ ಸದಸ್ಯರು, ಸಕಲ ಭಕ್ತರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 