ಅಣ್ಣಾಸಾಬ ಕೃಷ್ಣಾಜಿ ಹೆರವಾಡೆ ಅವಿರೋಧ ಆಯ್ಕೆ
Annasaba Krishnaji Herawade was elected unopposed
ರಾಯಬಾಗ 28: ತಾಲೂಕಿನ ಜಲಾಲಪೂರ ಗ್ರಾಮ ಪಂಚಾಯತಿ ಸದಸ್ಯ ವಿಲಾಸ ಹೆರವಾಡೆ ಅವರ ನಿಧನದಿಂದ ತೆರವಾಗಿದ್ದ ಸದಸ್ಯ ಸ್ಥಾನಕ್ಕೆ (ವಾರ್ಡ ನಂ.1) ನಡೆದ ಚುನಾವಣೆಯಲ್ಲಿ ಅಣ್ಣಾಸಾಬ ಕೃಷ್ಣಾಜಿ ಹೆರವಾಡೆ ಅವರು ಅವಿರೋಧವಾಗಿ ಆಯ್ಕೆಯಾದರು.
ಬುಧವಾರ ಜಲಾಲಪೂರ ಗ್ರಾ.ಪಂ.ಯಲ್ಲಿ ಚುನಾವಣಾಧಿಕಾರಿ ಎ.ಎಸ್.ಕಾಂಬಳೆ ಅವರು ಅಣ್ಣಾಸಾಬ ಹೆರವಾಡೆ ಅವರು ಅವಿರೋಧವಾಗಿ ಆಯ್ಕೆಯಾಗಿರುವುದಾಗಿ ಘೋಷಿಸಿ, ಪ್ರಮಾಣ ಪತ್ರ ನೀಡಿದರು. ನೂತನವಾಗಿ ಸದಸ್ಯರಾಗಿ ಆಯ್ಕೆಯಾದ ಅಣ್ಣಾಸಾಬ ಹೆರವಾಡೆ ಅವರನ್ನು ಗ್ರಾ.ಪಂ.ಸದಸ್ಯರು ಮತ್ತು ಗ್ರಾಮಸ್ಥರು ಸತ್ಕರಿಸಿದರು.
ಸತ್ಕಾರ ಸ್ವೀಕರಿಸಿ ಮಾತನಾಡಿದ ಅಣ್ಣಾಸಾಬ ಅವರು, ಅವಿರೋಧವಾಗಿ ಆಯ್ಕೆಯಾಗಲು ಪಂಚಾಯತಿ ಎಲ್ಲ ಸದಸ್ಯರು ಮತ್ತು ಗ್ರಾಮಸ್ಥರು ಸಹಕರಿಸಿದ್ದಾರೆ. ಎಲ್ಲರ ಸಹಕಾರದಿಂದ ಗ್ರಾಮದ ಸಮಗ್ರ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಶ್ರಮೀಸುವುದಾಗಿ ಹೇಳಿದರು.
ಪಿಡಿಒ ರವಿಕುಮಾರ ಮಠಪತಿ, ಉಪಾಧ್ಯಕ್ಷ ಮೌಲಾ ನದಾಫ, ನಾಮದೇವ ಕಾಂಬಳೆ, ರಘುನಾಥ ಶೆಲಾರ, ಜಗದೀಶ ಪವಾರ, ಬಸು ಅವ್ವನ್ನವರ, ರಘು ಹೆರವಾಡೆ, ಪಾಂಡು ಹವಾಲ್ದಾರ, ರಾಜು ಕಾಳೆ, ಅಭಿಜಿತ ಹರವಾಡೆ, ಗುರು ಹಿಡಕಲ, ರಾಜು ಶೇಲಾರ, ವಿಫುಲ ಹೆರವಾಡೆ, ಗೋವಿಂದ ಭಜಂತ್ರಿ, ಸಂಜು ಕಾಂಬಳೆ, ಮಾರುತಿ ಪಾಟೀಲ, ರಾಹುಲ ಹೆರವಾಡೆ, ಪುಂಡಲಿಕ ಚೌಗಲಾ ಸೇರಿದಂತೆ ಅನೇಕರು ಇದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 