ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭ

ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭ Annual Friendship Conference Ceremony


ರಾಯಬಾಗ, 10 : ವಿದ್ಯಾರ್ಥಿಗಳು ಯಾವದೇ ಒತ್ತಡಕ್ಕೆ ಒಳಗಾಗದೇ ಧೈರ್ಯ ಮತ್ತು ದಿಟ್ಟತನದಿಂದ ಪರೀಕ್ಷೆಯನ್ನು ಎದುರಿಸಿ ಯಶಸ್ವಿಯಾಗಬೇಕೆಂದು ಮೂಡಲಗಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕ ಪ್ರೊ.ಎಸ್‌.ಎಮ್‌.ಐಹೊಳೆ ಕರೆ ನೀಡಿದರು. 

ಮಂಗಳವಾರ ಪಟ್ಟಣದ ಶಿಕ್ಷಣ ಪ್ರಸಾರಕ ಮಂಡಳದ ಆನಂದಿಬಾಯಿ ಬಾಲಕಿಯರ ಪ್ರೌಢ ಮತ್ತು ಸಂಯುಕ್ತ ಪದವಿಪೂರ್ವ ಕಾಲೇಜಿನ ವಾರ್ಷಿಕ ಸ್ನೇಹ ಸಮ್ಮೇಳನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಾಧಕರು ನಮಗೆ ಆದರ್ಶವಾಗಬೇಕು, ಆಗ ಮಾತ್ರ ನಾವು ಜೀವನದಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದು ಹೇಳಿದರು. 

 ನಮ್ಮ ಜೀವನದ ಶಿಲ್ಪಿಗಳು ನಾವೇ ಆಗಿದ್ದು, ನಮಗೆ ದೊರೆಯುವ ಅವಕಾಶಗಳನ್ನು ಸದುಪಯೋಗ ಪಡಿಸಿಕೊಂಡು ಉನ್ನತ ಸ್ಥಾನ ಪಡೆಯಬೇಕೆಂದರು. ಸಂಸ್ಥೆ ಕಾರ್ಯದರ್ಶಿ ಎಸ್‌.ಎಸ್‌.ಶಿಂಗಾಡಿ ಮಾತನಾಡಿ, ಅಂದು ಅಭಾಜಿಯವರು ಕಟ್ಟಿ ಬೆಳೆಸಿದ ಸಂಸ್ಥೆ ಹೆಮ್ಮರವಾಗಿ ಬೆಳೆದು ನಿಂತಿದೆ. ಅಂದು ಅಭಾಜಿ ಯವರು ಶಿಕ್ಷಣ ಸಂಸ್ಥೆ ಪ್ರಾರಂಭಿಸುವುದರ ಜೊತೆಗೆ, ಅಂದಿನ ದಲಿತ, ಬಡ ವಿದ್ಯಾರ್ಥಿಗಳಿಗೆ ಶಿಕ್ಷಣದೊಂದಿಗೆ ಉಚಿತ ಪ್ರಸಾದ ನಿಲಯ ಪ್ರಾರಂಭಿಸಿದ್ದರಿಂದ, ಅನೇಕ ವಿದ್ಯಾರ್ಥಿಗಳು ದೇಶ ವಿದೇಶಗಳಲ್ಲಿ ಉನ್ನತ ಹುದ್ದೆ ಅಲಂಕರಿಸಿದ್ದಾರೆ ಎಂದು ಹೇಳಿದರು.ಅಧ್ಯಕ್ಷತೆಯನ್ನು ಮಾಜಿ ಸಂಸದ, ಸಂಸ್ಥೆ ಅಧ್ಯಕ್ಷ ಅಮರಸಿಂಹ ಪಾಟೀಲ ವಹಿಸಿದ್ದರು. ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ, 

ಸಾಂಸ್ಕೃತಿಕ ಮತ್ತು ಕ್ರೀಡಾಕೂಟದಲ್ಲಿ ವಿಜೇತರಾದ ವಿದ್ಯಾರ್ಥಿನಿಯರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಪ್ರಾಚಾರ್ಯ ಬಿ.ಎಸ್‌.ಶಿಂಗೆ, ಆರ್‌.ಎಸ್‌.ಗುಡೋಡಗಿ, ಅಕ್ಷಯ ಬನಾಜ, ಎಸ್‌.ಎಸ್‌.ಕಾಂಬಳೆ, ಕೀರ್ತಿ ತೇಲಿ, ಸರಿತಾ ಪುಟಾಣಿ, ಸಂತೋಷ ಐಹೊಳೆ ಹಾಗೂ ವಿದ್ಯಾರ್ಥಿನಿಯರು ಸೇರಿ ಅನೇಕರು ಇದ್ದರು.ಬಿ.ಎಸ್‌.ಶಿಂಗೆ ಸ್ವಾಗತಿಸಿದರು, ಸುರೇಶ ಐಹೊಳೆ ನಿರೂಪಿಸಿ, ವಂದಿಸಿದರು. 


Students' Success Facing Exams with Courage and Confidence Education Propagation Committee