ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಸಭೆ
Annual meeting of the Primary Agricultural Credit Cooperative Society
ಕಂಪ್ಲಿ 26: ಸಹಕಾರ ಸಂಘದ ಸದಸ್ಯರು ಸಂಘದ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಸಂಘದ ಅಧ್ಯಕ್ಷ ಹೊಸಕೋಟೆ ಜಗದೀಶ ಹೇಳಿದರು.
ತಾಲೂಕಿನ ಮೆಟ್ರಿ ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಕಛೇರಿ ಆವರಣದಲ್ಲಿ 2ನೇ ವರ್ಷದ ವಾರ್ಷಿಕ ಮಹಾಜನ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ರಸಗೊಬ್ಬರ ಮಾರಾಟಕ್ಕೆ ಪರವಾನಿಗೆ ದೊರತಿದ್ದು, ಸಮರ್ಕವಾಗಿ ರೈತರಿಗೆ ಗೊಬ್ಬರ ವಿತರಣೆ ಮಾಡಲಾಗುವುದು. ಸಹಕಾರ ಸಂಘದಿಂದ ನ್ಯಾಯ ಬೆಲೆ ಅಂಗಡಿ ಆರಂಭಿಸಿದರೆ, ಸಂಘದ ಅಭಿವೃದ್ಧಿಗೆ ಅನುಕೂಲವಾಗಿದೆ. ಆ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳಿಗೆ ಆಹಾರಧಾನ್ಯ ವಹಿವಾಟಿ ಅನುಮತಿ ನೀಡುವಂತೆ ಕೋರಿದ್ದು, ಈಗಾಗಲೇ ಎರಡು ವರ್ಷವಾಗಿದ್ದು, ಇನ್ನೊಂದು ವರ್ಷದಲ್ಲಿ ನ್ಯಾಯ ಬೆಲೆ ಅಂಗಡಿಗೆ ಪರವಾನಿಗೆ ಸಿಗಲಿದೆ. ಹೊಸದಾಗಿ ಸ್ಥಾಪನೆಗೊಂಡ ಸಹಕಾರ ಸಂಘದ ಅಭಿವೃದ್ಧಿಗೆ ಪ್ರತಿಯೊಬ್ಬರು ಸಹಕರಿಸಬೇಕು ಎಂದರು. ನಂತರ ಮುಖ್ಯಕಾರ್ಯನಿರ್ವಾಹಕ ಗೌಡ್ರು ಡಿಂಡಿ ಮಹರ್ಷಿ ವಾರ್ಷಿಕ ವರದಿ ಮಂಡಿಸಿ ಮಾತನಾಡಿ, ಸಂಘವು 754 ಜನ ಸದಸ್ಯರೊಂದಿಗೆ ಸುಮಾರು 16.41 ಲಕ್ಷ ಶೇರು ಬಂಡವಾಳ ಹೊಂದಿದೆ. 98 ಜನ ಸದಸ್ಯರಿಗೆ 85.69 ಲಕ್ಷ ಕೆಸಿಸಿ ಸಾಲ, 93ಜನಕ್ಕೆ 25.80 ಲಕ್ಷ ಬಿಡಿಪಿ ಸಾಲ, ಒಂದು ಸ್ವ-ಸಹಾಯ ಗುಂಪಿಗೆ 3 ಲಕ್ಷ ಸಾಲ ವಿತರಿಸಿದೆ. ಸಹಕಾರ ಸಂಘವು ಅಭಿವೃದ್ಧಿ ಹೊಂದಲು ಸದಸ್ಯರು, ಗ್ರಾಹಕರು ಸಹಕರಿಸಬೇಕು ಎಂದರು.
ಈ ಸಂದರ್ಭದಲ್ಲಿ ಉಪಾಧ್ಯಕ್ಷ ಗಂಗಾಧರ, ನಿರ್ದೇಶಕರಾದ ಹೊನ್ನಳ್ಳಿ ಗಂಗಾಧರ, ಜಮಾಪುರ ವೀರಭದ್ರ್ಪ, ಅಯ್ಯಪ್ಪ ಸಿಂದಿಗೇರಿ, ಬಿ.ಚಂದ್ರಶೇಖರ, ಪಿ.ಶೇಕ್ಷಾವಲಿ, ಸಿ.ಡಿ.ಪಾಂಡುರಂಗ, ಗಿರೆಡ್ಡಿ ಮರೇಗೌಡ, ಹೆಚ್.ಪಕ್ಕೀರ್ಪ, ಕೆ.ಲಕ್ಷ್ಮಿ, ಎನ್.ಮಂಜುಳಾ, ಜಿ.ನಾಗರಾಜಗೌಡ, ಚಂದ್ರರೆಡ್ಡಿ ಸೇರಿದಂತೆ ಮುಖಂಡರು, ರೈತರು, ಸಿಬ್ಬಂದಿ ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 