ಮಾನವ ಕಳ್ಳಸಾಗಣೆ ವಿರೋಧಿ ದಿನಾಚರಣೆ
Anti-Human Trafficking Day Observance
ಲೋಕದರ್ಶನ ವರದಿ
ಹೂವಿನಹಡಗಲಿ 02- ಮಾನವ ಕಳ್ಳಸಾಗಣೆ ಚಟುವಟಿಕೆಗಳಲ್ಲಿ ಆರ್ಥಿಕ ದುರ್ಬಲವರ್ಗದವರು, ಅಮಾಯಕ ಮಹಿಳೆಯರು, ಮಕ್ಕಳು ಬಲಿಪಶುಗಳಾಗುತ್ತಿದ್ದಾರೆ. ಇಂತಹ ಕೃತ್ಯವನ್ನು ತಡೆಗಟ್ಟಲು ಸಾರ್ವಜನಿಕರಿಗೆ ಅರಿವು ಅಗತ್ಯವಿದೆ ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಕೆ.ಅಜ್ಜಯ್ಯ ಹೇಳಿದರು. ಇಲ್ಲಿನ ಸೊಪ್ಪಿನ ಕಾಳಮ್ಮ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಕಾನೂನು ಸೇವಾ ಸಮಿತಿ, ವಕೀಲರ ಸಂಘ, ಶಿಕ್ಷಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಮಾನವ ಕಳ್ಳ ಸಾಗಣೆ ವಿರೋಧಿ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಕೆ. ಮಂಗಳಾ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಶಾಲಾ ವಿದ್ಯಾರ್ಥಿಗಳು ಪಠ್ಯದ ಜತೆಗೆ ಕಾನೂನಿನ ಅರಿವು ಬೆಳೆಸಿಕೊಳ್ಳುವ ಮೂಲಕ ಉತ್ತಮ ನಾಗರಿಕರಾಗಿ ರೂಪುಗೊಳ್ಳಬೇಕಿದೆ ಎಂದರು. ವಕೀಲರಾದ ಅಟವಾಳಗಿ ಕೊಟ್ರೇಶ, ಗದುಗಿನ ಹನುಮಂತಪ್ಪ ಉಪನ್ಯಾಸ ನೀಡಿದರು. ಹಿರಿಯ ಸಂಧಾನಕಾರ ಡಿ.ಕೆ.ಎಂ.ಚನ್ನಬಸಯ್ಯ, ವಕೀಲ ರಾಜಭಕ್ಷಿ, ಕ್ಷೇತ್ರ ಸಮನ್ವಯಾಧಿಕಾರಿ ಎ. ಕೋಟೆಪ್ಪ, ಉಪ ಪ್ರಾಚಾರ್ಯ ಬಿ.ರವೀಂದ್ರನಾಥ ಇದ್ದರು.
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಮನೆ ಮನೆಗಳ ಮೇಲೆ ಕನ್ನಡ ಬಾವುಟ ಅಭಿಯಾನ–2026’: 5 ಸಾವಿರ ಕನ್ನಡ ಧ್ವಜಗಳ ಉಚಿತ ವಿತರಣೆ
ಉತ್ತರ ವಲಯ ಪೊಲೀಸರಿಂದ ರೌಡಿ ನಿಗ್ರಹಕ್ಕೆ ಕಠಿಣ ಕ್ರಮ : 23 ರೌಡಿಗಳ ಗಡಿಪಾರು
6.85 ಕೆ.ಜಿ. ಗಾಂಜಾ ಮಿಶ್ರಿತ ಚಾಕಲೇಟ್ ಪ್ಯಾಕೆಟ್ಗಳ ವಶ: ಓರ್ವ ಆರೋಪಿ ಬಂಧನ
ಕಳೆದುಹೋಗಿದ್ದ 57 ಮೊಬೈಲ್ ಸಿಇಐಆರ್ ಪೋರ್ಟಲ್ ಮೂಲಕ ಪತ್ತೆ: ವಾರಸುದಾರರಿಗೆ ವಾಪಸ್
ಬಹುಕೋಟಿ ವಂಚನೆ : ನೀಲಣ್ಣವರ, ಪತ್ನಿ ಸೇರಿ ಆಪ್ತರ ಕಚೇರಿ, ನಿವಾಸಗಳ ಮೇಲೆ ಇಡಿ ದಾಳಿ 