ಕಾಶ್ಮೀರ ತಾಜಾ ಸೇಬಿನ ಹಣ್ಣುಗಳ ಮೇಲೂ ಭಾರತ ವಿರೋಧಿ ಘೋಷಣೆ....!
ಶ್ರೀನಗರ, ಅ 17: ಮಾರುಕಟ್ಟೆಗೆ ಕಾಶ್ಮೀರದ ತಾಜಾ ಸೇಬು ಹಣ್ಣುಗಳು ಬಂದಿವೆ. ವ್ಯಾಪಾರಿಗಳು ಸಂತಸದಿಂದಲೇ ಸೇಬು ಖರೀದಿಸಿದರು, ಹಣ್ಣಿನ ಪೆಟ್ಟಿಗೆ ತೆರೆದು ನೋಡಿ... ದಿಗ್ಬ್ರಮೆಗೊಳಗಾಗಿದ್ದಾರೆ...!
ಸೇಬಿನ ಹಣ್ಣುಗಳ ಮೇಲೆ ಭಾರತ ವಿರೋಧಿ ಘೋಷಣೆಗಳನ್ನು ಕಪ್ಪು ಸ್ಕೆಚ್ ಪೆನ್ನಲ್ಲಿ ಬರೆದಿರುವುದೇ ಇದಕ್ಕೆ ಕಾರಣ. ಕಾಶ್ಮೀರದ ಕತುವಾ ಸಗಟು ಮಾರುಕಟ್ಟೆಯಲ್ಲಿ ಈ ಘಟನೆ ನಡೆದಿದೆ.
ಈ ಕೃತ್ಯವನ್ನು ವಿರೋಧಿಸಿ ವ್ಯಾಪಾರಿಗಳು ಕೂಡಲೇ ಮಾರುಕಟ್ಟೆಯ ಮುಂದೆ ಪ್ರತಿಭಟನೆ ನಡೆಸಿದರು. ಸೇಬು ಹಣ್ಣುಗಳ ಮೇಲೆ 'ಬುರ್ಹಾನ್ ವನಿ', 'ಪಾಕಿಸ್ತಾನ್ ಜಿಂದಾಬಾದ್' ಹಾಗೂ 'ಗೋ ಬ್ಯಾಂಕ್ ಇಂಡಿಯಾ' ಘೋಷಣೆಗಳನ್ನು ಬರೆದಿರುವ ಬಗ್ಗೆ ವ್ಯಾಪಾರಿಗಳು ತೀವ್ರ ಆಕ್ರೋಶಗೊಂಡಿದ್ದಾರೆ.
ಈ ಸಂಬಂಧ ಪೊಲೀಸರಿಗೆ ದೂರು ಸಲ್ಲಿಸಿರುವ ಮಾರುಕಟ್ಟೆ ಅಧ್ಯಕ್ಷ ರೋಹಿತ್ ಗುಪ್ತಾ, ದುಷ್ಕೃತ್ಯ ನಡೆಸಿದವರನ್ನು ಕೂಡಲೇ ಗುರುತಿಸಿ, ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಕೇಸು ದಾಖಲಿಸಿಕೊಂಡಿರುವ ಪೊಲೀಸರು ಕಿಡಿಗೇಡಿಗಳ ಪತ್ತೆಗೆ ಮುಂದಾಗಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 