ಭಯೋತ್ಪಾದನಾ ವಿರೋಧಿ ದಿನಾಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ
Anti-Terrorism Day: Pledge taken
ಭಯೋತ್ಪಾದನಾ ವಿರೋಧಿ ದಿನಾಚರಣೆ : ಪ್ರತಿಜ್ಞಾ ವಿಧಿ ಸ್ವೀಕಾರ
ಗದಗ 21: ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರ ಅಧ್ಯಕ್ಷತೆಯಲ್ಲಿ ಭಯೋತ್ಪಾದನಾ ವಿರೋಧಿ ದಿನಾಚರಣೆಯ ಅಂಗವಾಗಿ ಹಿಂಸೆ ಮತ್ತು ಭಯೋತ್ಪಾದನೆ ಮೆಟ್ಟಿ ಶಾಂತಿ, ಸೌಹಾರ್ದತೆ ಕಾಪಾಡುವ ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮ ಜರುಗಿತು.
ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ಅವರು ಅಹಿಂಸೆ ಹಾಗೂ ಸಹನೆಗೆ ಹೆಸರಾದ ನಮ್ಮ ರಾಷ್ಟ್ರದ ಭವ್ಯಪರಂಪರೆಯಲ್ಲಿ ದೃಢ ವಿಶ್ವಾಸವುಳ್ಳ ನಾವು ಎಲ್ಲ ಬಗೆಯ ಭಯೋತ್ಪಾದನೆ ಮತ್ತು ಹಿಂಸೆಯನ್ನು ನಮ್ಮ ಶಕ್ತಿ ಸಾಮರ್ಥ್ಯದಿಂದ ಎದುರಿಸಿ ಶಾಂತಿ, ಸಾಮಾಜಿಕ ಸೌಹಾರ್ದತೆ ಸಾಧಿಸಿ ವಿಚ್ಛಿದ್ರಕಾರಿ ಶಕ್ತಿಗಳೊಡನೆ ಹೋರಾಡುವ ಪಣ ತೊಡುವ ಪ್ರಮಾಣ ವಚನ ಬೋಧಿಸಿದರು.
ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಕಂದಾಯ ಇಲಾಖೆಯ ಶಿರಸ್ತೇದಾರರು ಹಾಗೂ ಸಿಬ್ಬಂದಿಗಳು ಹಾಜರಿದ್ದರು.
ಸಿಸಿಬಿ ಪೊಲೀಸರ ದಾಳಿ–4.96 ಲಕ್ಷ ಮೌಲ್ಯದ ಹೆರಾಯಿನ್ ವಶ, ಓರ್ವ ಬಂಧನ
ಬೆಂಗಳೂರು ಕ್ವಾರಿ ಬಂಡೆ ಕುಸಿತ: ಬಿಹಾರದ ಏಳು ಕಾರ್ಮಿಕರು ಮೃತ
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ 