ಹಾಲುಮತ ಸಮಾಜಕ್ಕೆ ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಸ್ಥಾನ : ಜಾರಕಿಹೊಳಿ
Apex bank directorship for the Haalumata society: Jarakiholi
ಬೆಳಗಾವಿ 05: ಕೊಟ್ಟ ಮಾತಿನಂತೆ ಹಾಲು ಮತ ಸಮಾಜಕ್ಕೆ ಅಪೆಕ್ಸ್ ಬ್ಯಾಂಕಿನ ಆಡಳಿತ ಮಂಡಳಿಗೆ ಹಾಲುಮತ ಕುರುಬ ಸಮಾಜಕ್ಕೆ ಪ್ರಾಶಸ್ತ್ಯವನ್ನು ನೀಡೇ ನೀಡುತ್ತೇವೆ ಎಂದು ಅರಭಾವಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಸ್ಪಷ್ಟಪಡಿಸಿದರು.
ಬೆಳಗಾವಿ ಡಿಸಿಸಿ ಬ್ಯಾಂಕಿನ ಎಲ್ಲ 16 ಜನ ನಿರ್ದೇಶಕರು ಸೇರಿಕೊಂಡು ರಾಹುಲ್ ಜಾರಕಿಹೊಳಿ ಅವರನ್ನು ಅಪೆಕ್ಸ್ ಬ್ಯಾಂಕಿನ ನಿರ್ದೇಶಕರನ್ನಾಗಿ ಆಯ್ಕೆ ಮಾಡಿದ್ದಾರೆ. ಬ್ಯಾಂಕಿನಿಂದ ಒಬ್ಬರನ್ನು ಅಪೆಕ್ಸ್ ಬ್ಯಾಂಕಿಗೆ ಕಳುಹಿಸಿಕೊಡುವ ನಿಯಮವು ಸರ್ಕಾರದ್ದಾಗಿದೆ. ಈ ಹಿನ್ನೆಲೆಯಲ್ಲಿ ರಾಹುಲ್ ಜಾರಕಿಹೊಳಿಯವರನ್ನು ಸರ್ವಾನುಮತದಿಂದ ಆಯ್ಕೆ ಮಾಡಿ ಕಳಿಸಿದ್ದೇವೆ.
ನಂತರ ರಾಹುಲ್ ಜಾರಕಿಹೊಳಿ ಅವರು ಹೆಸರನ್ನು ಸೂಚಿಸುವ ಒಬ್ಬ ವ್ಯಕ್ತಿಯನ್ನು ಬೆಳಗಾವಿ ಡಿಸಿಸಿ ಬ್ಯಾಂಕಿನ ಆಡಳಿತ ಮಂಡಳಿಯ ಸದಸ್ಯರಾಗುತ್ತಾರೆ. ಇದು ಕೂಡ ಸಹಕಾರ ಸಂಘದ ನಿಯಮವಾಗಿದೆ. ಮುಂದಿನ ದಿನಗಳಲ್ಲಿ ಕುರುಬ ಸಮಾಜದವರನ್ನು ಅಪೆಕ್ಸ್ ಬ್ಯಾಂಕಿನಿಂದ ನಾಮ ನಿರ್ದೇಶನ ಮಾಡಿಕೊಳ್ಳಲಾಗುತ್ತಿದೆ ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಈಗ ಎದ್ದಿರುವ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 