ಅಪ್ಪಣ್ಣ ಹಂಜೆ ಅವರಿಗೆ ಸಾಹಿತ್ಯ ಸಿರಿ ಪ್ರಶಸ್ತಿ
Appanna Hanje receives Sahitya Siri Award
ಗದಗ 14: ಕರ್ನಾಟಕದ ಇತಿಹಾಸ, ಧರ್ಮ, ಸಾಹಿತ್ಯ, ವಾಸ್ತುಕಲೆ, ಶಿಲ್ಪಕಲೆ, ಶಾಸನ, ಸಂಸ್ಕೃತಿ ಮುಂತಾದ ಕ್ಷೇತ್ರಗಳಲ್ಲಿ ಸಂಶೋಧನೆ, ಅಧ್ಯಯನ, ಪ್ರಕಟಣೆಯಲ್ಲಿ ತೊಡಗಿರುವ ಹುಲಕೋಟಿಯ ಶ್ರೀ ಕೆ.ಎಚ್. ಪಾಟೀಲ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಇತಿಹಾಸ ಪ್ರಾಧ್ಯಾಪಕರಾದ ಡಾ. ಅಪ್ಪಣ್ಣ ಹಂಜೆ ಅವರು ರಾಜ್ಯಮಟ್ಟದ ‘ಸಾಹಿತ್ಯ ಸಿರಿ’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಳಸ ಶ್ರೀ 1008 ಭಗವಾನ ಚಂದ್ರನಾಥಸ್ವಾಮಿ ಬಸದಿ ಜೀರ್ಣೋದ್ಧಾರ ಸಮಿತಿ ಸಂಯುಕ್ತಾಶ್ರಯದಲ್ಲಿ ಮೇ 18ರಂದು ಕಳಸದ ಕೆಳಂಗಡಿಯಲ್ಲಿರುವ ಶ್ರೀ ಚಂದ್ರನಾಥಸ್ವಾಮಿ ಬಸದಿಯ ಪಂಚಕಲ್ಯಾಣ ಹಾಗೂ ನೂತನ ಬಸದಿಯ ಲೋಕಾರೆ್ಣ ಮತ್ತು ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ನಡೆಯಲಿರುವ ರಾಜ್ಯ ್ರ್ರಥಮ ಜೈನ ಸಾಹಿತ್ಯ ಸಮ್ಮೇಳನದಲ್ಲಿ ಡಾ. ಅಪ್ಪಣ್ಣ ಹಂಜೆ ಅವರಿಗೆ ಈ ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಲಾಗುವುದು ಎಂದು ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಸೂರಿ ಶ್ರೀನಿವಾಸ ತಿಳಿಸಿದ್ದಾರೆ.
ಪ್ರಶಸ್ತಿಗೆ ಭಾಜನರಾದ ಡಾ. ಅಪ್ಪಣ್ಣ ಹಂಜೆ ಅವರಿಗೆ ಕಾಲೇಜು ಅಭಿವೃದ್ಧಿ ಸಮಿತಿಯ ಅಧ್ಯಕ್ಷರು, ಸದಸ್ಯರು, ಪ್ರಾಚಾರ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು, ವಿದ್ಯಾರ್ಥಿಗಳು, ಗದಗ ಜಿಲ್ಲೆಯ ಸಾಹಿತಿಗಳು, ಸಂಶೋಧಕರು, ಗದಗ ಜಿಲ್ಲಾ ದಿಗಂಬರ ಜೈನ ಸಂಘದ ಪದಾಧಿಕಾರಿಗಳು ಅಭಿನಂದಿಸಿ ಶುಭ ಹಾರೈಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 