ಕೊಪ್ಪಳ ತಾಲೂಕಿನ ಬಸಾಪುರ ಕೆರೆಯನ್ನು ಜನ ಜಾನುವಾರುಗಳಿಗೆ ಮುಕ್ತವಾಗಿಡಲು ಒತ್ತಾಯಿಸಿ ಮನವಿ
Appeal demanding that Basapura Lake in Koppal taluk be kept open for people and livestock
ಕೊಪ್ಪಳ 16: ತಾಲೂಕಿನ ಬಸಾಪುರ ಕೆರೆಯನ್ನು ಜನ ಜಾನುವಾರುಗಳಿಗೆ ಮುಕ್ತವಾಗಿಡಲು ಒತ್ತಾಯಿಸಿ ಪ್ರಗತಿಪರ ಸಂಘಟನೆಗಳ ಒಕ್ಕೂಟದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಸುರೇಶ್ ಬಿ.ಇಟ್ನಾಳ ಅವರ ಅನುಪಸ್ಥಿತಿಯಲ್ಲಿ ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು. ಮನವಿಯಲ್ಲಿ ಕೊಪ್ಪಳ ತಾಲೂಕಿನ ಗಿಣಿಗೇರಿ ಹಾಗೂ ಹಿರೇ ಬಗನಾಳ ಗ್ರಾಮದ ಸುತ್ತಲೂ ತಲೆ ಎತ್ತಿ ನಿಂತಿರುವ ಬೃಹತ್ ಕಾರ್ಖಾನೆಗಳು ಹೊರ ಸೂಸುವ ರಾಸಾಯನಿಕ ಮಿಶ್ರಿತ ಹೊಗೆ ಹಾಗೂ ಧೂಳಿನಿಂದಾಗಿ ಜಿಲ್ಲೆಯ ಜನ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಕಾರ್ಖಾನೆಗಳಿಂದ ಉಂಟಾದ ಪರಿಸರ ಮಾಲಿನ್ಯದಿಂದಾಗಿ ಸಾಕಷ್ಟು ಜನ ಜಾನುವಾರುಗಳು ಮೃತಪಟ್ಟ ಉದಾಹರಣೆಗಳಿವೆ. ಇದರ ವಿರುದ್ಧ ಸುಮಾರು ವರ್ಷಗಳಿಂದ ವಿವಿಧ ರೀತಿಯ ಹೋರಾಟಗಳು ನಡೆಯುತ್ತಿವೆ. ಮಾಲಿನ್ಯದ ಜೊತೆಗೆ ಎಂ.ಎಸ್.ಪಿ.ಎಲ್.ಕಬಳಿಕೆ ಮಾಡಿರುವ ಬಸಾಪುರ ಕೆರೆಯನ್ನು ಜನ ಜಾನುವಾರುಗಳಿಗಾಗಿ ಮುಕ್ತಗೊಳಿಸಬೇಕೆಂಬುದು ಮುಖ್ಯ ಬೇಡಿಕೆಯಾಗಿದೆ.
ಮಾನ್ಯ ಜಿಲ್ಲಾಧಿಕಾರಿಗಳು ಕೆರೆಯನ್ನು ಮುಕ್ತಗೊಳಿಸಬೇಕು. ಈ ಸಮಸ್ಯೆಯನ್ನು ತಾವು ಗಂಭೀರವಾಗಿ ಪರಿಗಣಿಸಿಬೇಕಾಗಿದೆ. ಈ ವರ್ಷವು ಬಿಸಿಲಿನ ತಾಪಮಾನವು ವಿಪರಿತ ಇರುವುದರಿಂದ ಕುರಿ.ದನ.ಕರುಗಳಿಗೆ ಕುಡಿಯಲು ನೀರು ಇಲ್ಲದಂತಾಗಿ ತೊಂದರೆಯನ್ನು ಅನುಭವಿಸುತ್ತಿವೆ. ಕಾರಣ ಬಸಾಪುರ ಕೆರೆಯನ್ನು ಮುಕ್ತಗೊಳಿಸುವಲಿ ಕಾನೂನಿನ ತೊಡಕುಗಳಿದ್ದಲ್ಲಿ ತಾವು ಮಾನವೀಯ ನೆಲಗಟ್ಟಿನ ಮೇಲೆ ಯೋಚಿಸಿ ಬಸಾಪುರ ಕೆರೆ ಮುಕ್ತಗೊಳಿಸುವ ಮೂಲಕ ಜನ ಜಾನುವಾರಗಳಿಗೆ ನೀರು ಕುಡಿಯಲು ಅನುಕೂಲ ಮಾಡಿಕೊಡಬೇಕಾಗಿ ವಿನಂತಿಸುತ್ತೇವೆ ಎಂದು ಪ್ರಗತಿಪರ ಸಂಘಟನೆಗಳ ಒಕ್ಕೂಟದ ಮುಖ್ಯ ಸಂಚಾಲಕ ಬಸವರಾಜ್ ಶೀಲವಂತರ್. ಜನಪರ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಎಸ್.ಎ.ಗಫಾರ್. ಗಿಣಿಗೇರಾ ನಾಗರಿಕ ಹೋರಾಟ ಸಮಿತಿ ಸಂಚಾಲಕ ಮಂಗಳೇಶ ರಾಥೋಡ್. ಕುರಿಗಾರರ ಸಂಘದ ಅಧ್ಯಕ್ಷ ಯಮನೂರ್ಪ ಹಾಲಳ್ಳಿ. ಮುಖಂಡರಾದ ಬೀರ್ಪ ಶಹಾಪುರ.ಕಂಪ್ಲೆಪ್ಪ ಶಹಾಪುರ. ಪಾಸ್ಟರ್ಸ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಚನ್ನಬಸಪ್ಪ ಅಪ್ಪಣವರ್. ಅಹಿಂದ ಚಳುವಳಿಯ ಸಹ ಸಂಚಾಲಕ ಮುತ್ತುರಾಜ್ ಚನ್ನದಾಸರ. ಭಾರತೀಯ ಕಾರ್ಮಿಕ ಸಂಘಟನೆಗಳ ಒಕ್ಕೂಟದ ಸಂಚಾಲಕ ಮೌಲಾ ಹುಸೇನ್ ಹಣಗಿ.ಶಿವಪ್ಪ ಹಡಪದ್ ಮುಂತಾದವರು ಕೋರಿದ್ದಾರೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 