ಸಂಪೂರ್ಣ ಸರಕಾರಿ ವೈದ್ಯಕೀಯ ಕಾಲೇಜ ಸ್ಥಾಪನೆಗೆ ಮನವಿ
Appeal for establishment of a fully government medical college
ವಿಜಯಪುರ 01: ವಿಜಯಪುರದ ಸರಕಾರಿ ವೈದ್ಯಕೀಯ ಕಾಲೇಜನ್ನು ಖಾಸಗಿ ಸಹಭಾಗಿತ್ವದಲ್ಲಿ ಆರಂಭಿಸುವುದನ್ನು ವಿರೋಧಿಸಿ ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ ನೇತೃತ್ವದಲ್ಲಿ ನಿಯೋಗದಲ್ಲಿ ತೆರಳಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣ ಪ್ರಕಾಶ ಪಾಟೀಲ ಇವರನ್ನು ಕಲಬುರ್ಗಿಯಲ್ಲಿರುವ ಅವರ ಮನೆಗೆ ತೆರಳಿ ಮನವಿ ಸಲ್ಲಿಸಲಾಯಿತು.
ಪಿಪಿಪಿ ಮಾದರಿಗೆ ಜಿಲ್ಲೆಯ ಜನರ ತೀವ್ರ ವಿರೋಧವಿದ್ದು ಯಾವುದೇ ಕಾರಣಕ್ಕೂ ಖಾಸಗಿ ಸಹಭಾಗಿತ್ವದಲ್ಲಿ ವೈದ್ಯಕೀಯ ಕಾಲೇಜು ಆರಂಭಿಸಬಾರದು ಎಂದು ಹೋರಾಟ ಸಮಿತಿಯ ನಿಯೋಗವು ಸಚಿವರನ್ನು ಆಗ್ರಹಿಸಿತು. ಸಕಾರಾತ್ಮಾಕವಾಗಿ ಸ್ಪಂದಿಸಿದ ಸಚಿವರು ನಿಯೋಗದ ಮಾತುಕತೆಗಳನ್ನು ಆಲಿಸಿದರು.
ನಿಯೋಗದಲ್ಲಿ ಹೋರಾಟ ಸಮಿತಿಯ ಮುಖಂಡರುಗಳಾದ ಬಿ.ಭಗವಾನ್ ರೆಡ್ಡಿ, ಅಕ್ರಮ ಮಾಶಾಳಕರ, ಅರವಿಂದ ಕುಲಕರ್ಣಿ, ಹೆಚ್ ಟಿ ಭರತಕುಮಾರ, ಅಲ್ಲಮ ಪ್ರಬು, ರೇಣುಕಾ, ಗುರುರಾಜ ದೇಶಪಾಂಡೆ,ಮನೊಜಕುಮಾರ ಗುದ್ದಿ ಮುಂತಾದವರು ಹಾಜರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 