ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಮನವಿ
Appeal for establishment of government medical college
ವಿಜಯಪುರ 31: ನಗರದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ ರವರಿಗೆ ‘ಸರಕಾರಿ ವೈದ್ಯಕೀಯ ಕಾಲೇಜು ಸ್ಥಾಪನೆಗಾಗಿ ಹೋರಾಟ ಸಮಿತಿ’ಯ ನೇತೃತ್ವದಲ್ಲಿಂದು ನಿಯೋಗದಲ್ಲಿ ತೆರಳಿ ಮನವಿ ಸಲ್ಲಿಸಲಾಯಿತು.
ಸರಕಾರದಿಂದ ಉದ್ದೇಶಿತ ಪಿಪಿಪಿ ಮಾದರಿಯಡಿ ಖಾಸಗಿ ಸಹಭಾಗಿತ್ವದಡಿ ವೈದ್ಯಕೀಯ ಕಾಲೇಜು ಆರಂಭಿಸುವ ಹುನ್ನಾರವನ್ನು ಕೈಬಿಟ್ಟು, ಸರ್ಕಾರವೇ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಮನವಿ ಸಲ್ಲಿಸಲಾಯಿತು. ಜೊತೆಗೆ ಸರಕಾರಿ ವೈದ್ಯಕೀಯ ಕಾಲೆಜು ಆರಂಭಿಸಲು ಮಾನ್ಯ ಮುಖ್ಯಮಂತ್ರಿಯವರ ಮೇಲೆ ಒತ್ತಡ ತರುವಂತೆ ಆಗ್ರಹಿಸಲಾಯಿತು.
ಈ ನಿಯೋಗದಲ್ಲಿ ಹೋರಾಟ ಸಮಿತಿಯ ಸಂಚಾಲಕ ಸಮಿತಿಯ ಸದಸ್ಯರುಗಳಾದ ಭಿ.ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಅಕ್ರಮ ಮಾಷಾಳಕರ, ಲಲಿತಾ ಬಿಜ್ಜರಗಿ, ಮಲ್ಲಿಕಾರ್ಜುನ ಬಟಗಿ, ಮಲ್ಲಿಕಾರ್ಜುನ ಹೆಚ್ ಟಿ, ಸಿದ್ದಲಿಂಗ ಬಾಗೇವಾಡಿ, ಬಾಳು ಜೇವೂರ, ಪ್ರಭುಗೌಡ ಪಾಟೀಲ, ದಸ್ತಗಿರ ಉಕ್ಕಲಿ, ಭರತಕುಮಾರ ಹೆಚ್,ಟಿ ಗೀತಾ ಹೆಚ್, ಸಂಗಮೇಶ ಸಗರ, ಬಾಬುರಾವ್ ಬೀರಕಬ್ಬಿ, ಸಿದ್ರಾಮ ಹಿರೇಮಠ, ಶ್ರೀಕಾಂತ ಕೊಂಡಗೂಳಿ ಮುಂತಾದವರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 