ಸರ್ಕಾರಿ ಪ್ರೌಢ ಶಾಲೆ ಮಂಜೂರಿಗೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ಘಟಪ್ರಭಾ 13: ದುಪದಾಳ ಗ್ರಾಮಕ್ಕೆ ಕೂಡಲೇ ಸರ್ಕಾರಿ ಪ್ರೌಢ ಶಾಲೆಯನ್ನು ಮಂಜೂರು ಮಾಡಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಗ್ರಾಮ ಘಟಕದ ವತಿಯಿಂದ ಗ್ರಾಮದ ಸಕರ್ಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಂದಿನ ಮುಖ್ಯ ರಸ್ತೆಯನ್ನು ತಡೆದು ಪ್ರತಿಭಟನೆ ನಡೆಸಿ ನಂತರ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.
ತಾಲೂಕಾ ಸಂಚಾಲಕ ರೆಹಮಾನ ಮೊಕಾಶಿ, ಮಾತನಾಡಿ ಪ್ರತಿ ವರ್ಷ ಸುಮಾರು 80 ಕ್ಕೂ ಹೆಚ್ಚು ವಿದ್ಯಾರ್ಥಿ -ವಿದ್ಯಾರ್ಥಿನಿಯರು 8 ನೇ ತರಗತಿ ಪಾಸಾಗುತ್ತಾರೆ. ಮುಂದಿನ ವ್ಯಾಸಂಗಕ್ಕೆ ಗ್ರಾಮದಲ್ಲಿ ಪ್ರೌಢ ಶಾಲೆ ಇಲ್ಲರಿರುವುದರಿಂದ ಬೇರೆ ಊರಕ್ಕೆ ಹೋಗೋಕೆ ಆಗದೇ 40 ಕ್ಕೂ ಹೆಚ್ಚು ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸವನ್ನು ಅರ್ಧಕ್ಕೆ ಬಿಡುತ್ತಿದ್ದಾರೆ. ಆದ್ದರಿಂದ ಸರ್ಕಾರ ಕೂಡಲೇ ಗ್ರಾಮಕ್ಕೆ ಪ್ರೌಢ ಶಾಲೆಯನ್ನು ಮಂಜೂರ ಮಾಡಬೇಕು ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಮನವಿ ಸ್ವೀಕರಿಸಿ ಮಾತನಾಡಿದ ಗೋಕಾಕ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಿಗಾರ, ಗ್ರಾಮಕ್ಕೆ ಸಕರ್ಾರಿ ಶಾಲೆ ಮಂಜೂರು ಮಾಡುವ ಕುರಿತು ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ಯೋಗ್ಯ ಕ್ರಮ ಕೈಗೊಳ್ಳಲಾವುದು ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಕರವೇ ಘಟಕ ಅಧ್ಯಕ್ಷ ಶೆಟ್ಟೆಪ್ಪಾ ಗಾಡಿವಡ್ಡರ, ರವಿ ನಾವಿ, ಅಮಿರಖಾನ ಜಗದಾಳ, ಸುನೀಲ ಕೊಟಬಾಗಿ, ನೇಮಿನಾಥ ಬೊಮ್ಮಣ್ಣವರ, ಭರತೇಷ ಪರಪ್ಪನವರ, ರಾಮ ಗಾಡಿವಡ್ಡರ, ಇಸಾಕ ಕೋತವಾಲ, ಶಾಕೀಬ ಮುಲ್ಲಾ, ವಿಠ್ಠಲ ಗಾಡಿವಡ್ಡರ, ಲಗಮಣ್ಣಾ ಗಾಡಿವಡ್ಡರ, ಹಣಮಂತ ಗಾಡಿವಡ್ಡರ, ಅಮೃತ ಜಿರಳಿ, ಮಾರುತಿ ಕುರಬೇಟ, ಮುಬಾರಕ ಜಮಕಂಡಿ ಸೇರಿದಂತೆ ನೂರಾರು ಕಾರ್ಯಕರ್ತರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 