ಗಂಗಾವತಿ-ದರೋಜಿ ನೂತನ ರೇಲ್ವೆ ಲೈನ್ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೆ ಮನವಿ
Appeal for release of funds for construction of new Gangavathi-Daroji railway line
ಗಂಗಾವತಿ 22: ಕೊಪ್ಪಳ ಜಿಲ್ಲಾ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಅಶೋಕಸ್ವಾಮಿ ಹೇರೂರ ಅವರ ಮನವಿಯ ಮೇರೆಗೆ ಕರ್ನಾಟಕ ರಾಜ್ಯ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಮಹಾ ಮಂಡಳಿಯ ನಿಯೋಗ ಗುರುವಾರ ಸಾಯಂಕಾಲ ಗಂಗಾವತಿ-ದರೋಜಿ ನೂತನ ರೇಲ್ವೆ ಲೈನ್ ನಿರ್ಮಾಣಕ್ಕೆ ಅನುದಾನ ಬಿಡುಗಡೆ ಮಾಡಬೇಕೆಂದು ಕೇಂದ್ರ ರೇಲ್ವೆ ಸಚಿವ ಅಶ್ವಿನಿ ವೈಷ್ಣವ ಮತ್ತು ರಾಜ್ಯ ರೇಲ್ವೆ ಸಚಿವ ವಿ.ಸೋಮಣ್ಣ ಅವರಿಗೆ ದೆಹಲಿಯಲ್ಲಿ ಮನವಿ ಸಲ್ಲಿಸಿದೆ.
ಸದ್ರಿ ನಿಯೋಗದಲ್ಲಿ ಮಹಾ ಮಂಡಳಿಯ ಅಧ್ಯಕ್ಷ ಎಮ್.ಜಿ.ಬಾಲಕೃಷ್ಣ, ಕೊಪ್ಪಳ-ರಾಯಚೂರು-ಯಾದಗಿರಿ ಜಿಲ್ಲೆಗಳನ್ನು ಪ್ರತಿನಿಧಿಸುವ ನಿರ್ದೇಶಕ ತ್ರಿವಿಕ್ರಮ ಜೋಶಿ ಇತರ ಪದಾಧಿಕಾರಿಗಳಾದ ವಿ.ಜಿ.ಕಿರಣ ಕುಮಾರ್, ಬಾಲಾಜಿ,ನಂಜುಂಡ ಪ್ರಸಾದ್ ಮತ್ತು ಮಧುಸೂದನ್ ನಿಯೋಗದಲ್ಲಿದ್ದರು ಎಂದು ಅಶೋಕಸ್ವಾಮಿ ಹೇರೂರ ತಿಳಿಸಿದ್ದಾರೆ.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 