ಉಮಾಶಂಕರ ಅಮಾನತಿಗೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ರಾಯಬಾಗ: ಸಂವಿಧಾನ ದಿನಕ್ಕಾಗಿ ಸಿದ್ಧಪಡಿಸಿರುವ ಕೈಪಿಡಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಶಿಕ್ಷಣ ಇಲಾಖೆಯ ಉಮಾಶಂಕರ ಅವರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಕನರ್ಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲೂಕು ಪದಾಧಿಕಾರಿಗಳು ತಹಶೀಲ್ದಾರ ಡಿ.ಎಚ್.ಕೋಮರ ಮೂಲಕ ರಾಜ್ಯಪಾಲರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ರಾಜ್ಯ ಸಂಘಟನಾ ಸಂಚಾಲಕ ರಾಜು ತಳವಾರ ಮಾತನಾಡಿ, ರಾಜ್ಯ ಶಾಲಾ ಕಾಲೇಜು ವಿದ್ಯಾಥರ್ಿಗಳಿಗೆ ಸಂವಿಧಾನ ಮೂಲ ಆಶಯ ತಿಳಿಸುವ ಕೈಪಿಡಿಯಲ್ಲಿ ಕನರ್ಾಟಕ ರಾಜ್ಯ ಶಿಕ್ಷಣ ಇಲಾಖೆ ಮುದ್ರಿಸಿರುವ ವಿಷಯಗಳು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವ ರೀತಿಯಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಾ.ಅಂಬೇಡ್ಕರ್ರವರು ಸಂವಿಧಾನ ಓದುವುದಷ್ಟೇ ಕೆಲಸವಾಗಿತ್ತು ಎಂಬಂತೆ ಬಿಂಬಸಲಾಗಿದ್ದು, ಕೈಪಿಡಿಯಲ್ಲಿ ಅನೇಕ ಅಪಾರ್ಥ ಪದಗಳಿಂದ ಕೂಡಿದೆ. ಡಾ.ಅಂಬೇಡ್ಕರ್ರವರಿಗೆ ಹಾಗೂ ಅವರನ್ನು ಅನುಸರಿಸುವ ಸಮುದಾಯಕ್ಕೆ ಅವಮಾನ ಮಾಡಿದ್ದು, ಈ ಕೈಪಿಡಿ ಸಿದ್ಧಪಡಿಸಿದ ಶಿಕ್ಷಣ ಇಲಾಖೆಯ ಉಮಾಶಂಕರ ಅವರನ್ನು ಅಮಾನತ್ತು ಮಾಡಿ, ಅವರ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು. ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ತಾಲೂಕು ಸಂಚಾಲಕ ಸಿದ್ದು ಕಾಂಬಳೆ, ನಾಮದೇವ ಕಾಂಬಳೆ, ಸಂತೋಷ ಕಾಂಬಳೆ, ಸುಜೀತ ಕಾಂಬಳೆ, ಸಂಜು ಕಾಂಬಳೆ, ಜ್ಯೋತಿಬಾ ಚಾಂಬಾರ, ಪರಶುರಾಮ ಕಾಂಬಳೆ, ವಸಂತ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 