ಉಮಾಶಂಕರ ಅಮಾನತಿಗೆ ಆಗ್ರಹಿಸಿ ಮನವಿ
ಲೋಕದರ್ಶನ ವರದಿ
ರಾಯಬಾಗ: ಸಂವಿಧಾನ ದಿನಕ್ಕಾಗಿ ಸಿದ್ಧಪಡಿಸಿರುವ ಕೈಪಿಡಿಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಶಿಕ್ಷಣ ಇಲಾಖೆಯ ಉಮಾಶಂಕರ ಅವರನ್ನು ಅಮಾನತ್ತು ಮಾಡಬೇಕೆಂದು ಆಗ್ರಹಿಸಿ ಕನರ್ಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ತಾಲೂಕು ಪದಾಧಿಕಾರಿಗಳು ತಹಶೀಲ್ದಾರ ಡಿ.ಎಚ್.ಕೋಮರ ಮೂಲಕ ರಾಜ್ಯಪಾಲರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ರಾಜ್ಯ ಸಂಘಟನಾ ಸಂಚಾಲಕ ರಾಜು ತಳವಾರ ಮಾತನಾಡಿ, ರಾಜ್ಯ ಶಾಲಾ ಕಾಲೇಜು ವಿದ್ಯಾಥರ್ಿಗಳಿಗೆ ಸಂವಿಧಾನ ಮೂಲ ಆಶಯ ತಿಳಿಸುವ ಕೈಪಿಡಿಯಲ್ಲಿ ಕನರ್ಾಟಕ ರಾಜ್ಯ ಶಿಕ್ಷಣ ಇಲಾಖೆ ಮುದ್ರಿಸಿರುವ ವಿಷಯಗಳು ಡಾ.ಬಿ.ಆರ್.ಅಂಬೇಡ್ಕರ್ ಅವರನ್ನು ಅವಮಾನಿಸುವ ರೀತಿಯಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಡಾ.ಅಂಬೇಡ್ಕರ್ರವರು ಸಂವಿಧಾನ ಓದುವುದಷ್ಟೇ ಕೆಲಸವಾಗಿತ್ತು ಎಂಬಂತೆ ಬಿಂಬಸಲಾಗಿದ್ದು, ಕೈಪಿಡಿಯಲ್ಲಿ ಅನೇಕ ಅಪಾರ್ಥ ಪದಗಳಿಂದ ಕೂಡಿದೆ. ಡಾ.ಅಂಬೇಡ್ಕರ್ರವರಿಗೆ ಹಾಗೂ ಅವರನ್ನು ಅನುಸರಿಸುವ ಸಮುದಾಯಕ್ಕೆ ಅವಮಾನ ಮಾಡಿದ್ದು, ಈ ಕೈಪಿಡಿ ಸಿದ್ಧಪಡಿಸಿದ ಶಿಕ್ಷಣ ಇಲಾಖೆಯ ಉಮಾಶಂಕರ ಅವರನ್ನು ಅಮಾನತ್ತು ಮಾಡಿ, ಅವರ ವಿರುದ್ಧ ಕಠಿಣಕ್ರಮ ಕೈಗೊಳ್ಳಬೇಕು. ಹಾಗೂ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.
ತಾಲೂಕು ಸಂಚಾಲಕ ಸಿದ್ದು ಕಾಂಬಳೆ, ನಾಮದೇವ ಕಾಂಬಳೆ, ಸಂತೋಷ ಕಾಂಬಳೆ, ಸುಜೀತ ಕಾಂಬಳೆ, ಸಂಜು ಕಾಂಬಳೆ, ಜ್ಯೋತಿಬಾ ಚಾಂಬಾರ, ಪರಶುರಾಮ ಕಾಂಬಳೆ, ವಸಂತ ಕಾಂಬಳೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 