ಹೊಂಡದ ತ್ಯಾಜ್ಯ ಮುಕ್ತಿಗೆ ಮನವಿ
ಗುಳೇದಗುಡ್ಡ16: ಪ್ರಸಿದ್ದ ಬಾದಾಮಿ ಬನಶಂಕರಿ ದೇವಸ್ಥಾನದ ಜಾತ್ರೆ ವಿಜೃಂಭಣೆಯಿಂದ ನಡೆದಿದ್ದೂ , ವಿವಿಧ ಭಾಗಗಳಿಂದ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾಧಿಗಳು ಬರುತ್ತಿದ್ದಾರೆ.
ಆದರೆ ದೇವಸ್ಥಾನದ ಎದುರಿನ ಹೊಂಡದಲ್ಲಿ ಭಕ್ತಾಧಿಗಳು ನಿತ್ಯ ಸಾಕಷ್ಟು ತ್ಯಾಜ್ಯವನ್ನು ಚಲ್ಲುತ್ತಿರುವುದರಿಂದ ಹೊಂಡದ ನೀರು ಮಲೀನವಾಗುತ್ತಿದೆ ಎಂದು ಭಕ್ತಾಧಿಗಳು ಅರೋಪಿಸುತ್ತಿದ್ದಾರೆ. ಅದರಲ್ಲಿಯೇ ಭಕ್ತರು ಸ್ನಾನ ಮಾಡುವುದು, ಪೂಜೆಗೆ ನೀರು ಬಳಸುವುದು ಕಂಡು ಬರುತ್ತಿದ್ದೂ, ಭಕ್ತರು ಹೊಂಡದಲ್ಲಿ ಹೂ, ಹಾರ, ಮಲೀನ ಬಟ್ಟೆ ಬಿಡುತ್ತಿರುವುದು ಹೆಚ್ಚಾಗಿದೆ. ಇದನ್ನು ನಿಯಂತ್ರಿಸಬೇಕು. ಅಲ್ಲದೇ ನಿತ್ಯ ಹೊಂಡದಲ್ಲಿನ ತ್ಯಾಜ್ಯವನ್ನು ವಿಲೇವಾರಿ ಮಾಡಿ ನೀರು ಶುದ್ದವಾಗಿರುವಂತೆ ಸಂಬಂಧಪಟ್ಟ ಆಡಳಿತ ಮಂಡಳಿ ಕ್ರಮಕೈಗೊಳ್ಳಬೇಕೆಂದು ಗುಳೇದಗುಡ್ಡ, ಕೆರೂರ, ಹಂಸನೂರ ಸೇರಿದಂತೆ ವಿವಿಧ ಕಡೆಗಳಲ್ಲಿನ ಭಕ್ತರು ಆಗ್ರಹಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 