ಪೈಪ್ಲೈನ್ ಅಳವಡಿಸುವಂತೆ ಸಚಿವ ಡಿ,ಕೆ. ಶಿವಕುಮಾರರಿಗೆ ಮನವಿ
Appeal to Minister D,K. Shivakumar to nstall the pipeline,
ಜಮಖಂಡಿ 17: ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯಿಂದ ಗಲಗಲಿ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್ವರೆಗೆ ಪೈಪ್ಲೈನ್ ಅಳವಡಿಸುವಂತೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಲ ಸಂಪನ್ಮೂಲ ಸಚಿವ ಡಿ,ಕೆ. ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈಗಾಗಲೇ ಅಸ್ತಿತ್ವದಲ್ಲಿರುವ ಮಂಟೂರು ಏತ ನೀರಾವರಿ ಯೋಜನೆಯಿಂದ ಗಲಗಲಿ ಬ್ಯಾರೇಜ್ದವರೆಗೆ ಪೈಪ್ಲೈನ್ ಜೋಡಣೆ ಮಾಡುವುದರಿಂದ ಬೇಸಿಗೆಯ ದಿನದಲ್ಲಿ ರೈತರಿಗೆ, ಜನ-ಜಾನುವಾರುಗಳಿಗೆ ನೀರಿನ ತೊಂದರೆ ಕಡಿಮೆಯಾಗುತ್ತದೆ. ಇದರಿಂದ ಸುಮಾರು 50 ರಿಂದ 60 ಹೆಚ್ಚು ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದಂತಾಗುತ್ತದೆ , ಅಂದಾಜು 440 ಲಕ್ಷ ವೆಚ್ಚದ ಕಾಮಗಾರಿಗೆ ಹಣ ಖರ್ಚಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು, ಆದ್ದರಿಂದ ಕಾಮಗಾರಿಕೆಗೆ ಮಂಜೂರಾತಿ ನೀಡಬೇಕೆಂದು ಮನವಿ ಮಾಡಿದರು.
ಜಲಸಂಪನ್ಮೂಲ ಸಚಿವರು ಕಾಮಗಾರಿ ಪರೀಶೀಲಿಸಿ ವರದಿ ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 