ಪೈಪ್ಲೈನ್ ಅಳವಡಿಸುವಂತೆ ಸಚಿವ ಡಿ,ಕೆ. ಶಿವಕುಮಾರರಿಗೆ ಮನವಿ
Appeal to Minister D,K. Shivakumar to nstall the pipeline,
ಜಮಖಂಡಿ 17: ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯಿಂದ ಗಲಗಲಿ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್ವರೆಗೆ ಪೈಪ್ಲೈನ್ ಅಳವಡಿಸುವಂತೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಲ ಸಂಪನ್ಮೂಲ ಸಚಿವ ಡಿ,ಕೆ. ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈಗಾಗಲೇ ಅಸ್ತಿತ್ವದಲ್ಲಿರುವ ಮಂಟೂರು ಏತ ನೀರಾವರಿ ಯೋಜನೆಯಿಂದ ಗಲಗಲಿ ಬ್ಯಾರೇಜ್ದವರೆಗೆ ಪೈಪ್ಲೈನ್ ಜೋಡಣೆ ಮಾಡುವುದರಿಂದ ಬೇಸಿಗೆಯ ದಿನದಲ್ಲಿ ರೈತರಿಗೆ, ಜನ-ಜಾನುವಾರುಗಳಿಗೆ ನೀರಿನ ತೊಂದರೆ ಕಡಿಮೆಯಾಗುತ್ತದೆ. ಇದರಿಂದ ಸುಮಾರು 50 ರಿಂದ 60 ಹೆಚ್ಚು ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದಂತಾಗುತ್ತದೆ , ಅಂದಾಜು 440 ಲಕ್ಷ ವೆಚ್ಚದ ಕಾಮಗಾರಿಗೆ ಹಣ ಖರ್ಚಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು, ಆದ್ದರಿಂದ ಕಾಮಗಾರಿಕೆಗೆ ಮಂಜೂರಾತಿ ನೀಡಬೇಕೆಂದು ಮನವಿ ಮಾಡಿದರು.
ಜಲಸಂಪನ್ಮೂಲ ಸಚಿವರು ಕಾಮಗಾರಿ ಪರೀಶೀಲಿಸಿ ವರದಿ ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ 