ಪೈಪ್ಲೈನ್ ಅಳವಡಿಸುವಂತೆ ಸಚಿವ ಡಿ,ಕೆ. ಶಿವಕುಮಾರರಿಗೆ ಮನವಿ
Appeal to Minister D,K. Shivakumar to nstall the pipeline,
ಜಮಖಂಡಿ 17: ಮಂಟೂರು ಮಹಾಲಕ್ಷ್ಮಿ ಏತ ನೀರಾವರಿ ಯೋಜನೆಯಿಂದ ಗಲಗಲಿ ಹತ್ತಿರ ಕೃಷ್ಣಾ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಬ್ಯಾರೇಜ್ವರೆಗೆ ಪೈಪ್ಲೈನ್ ಅಳವಡಿಸುವಂತೆ ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಜಲ ಸಂಪನ್ಮೂಲ ಸಚಿವ ಡಿ,ಕೆ. ಶಿವಕುಮಾರ ಅವರಿಗೆ ಬೆಂಗಳೂರಿನಲ್ಲಿ ಭೇಟಿಯಾಗಿ ಮನವಿ ಸಲ್ಲಿಸಿದರು.
ಈಗಾಗಲೇ ಅಸ್ತಿತ್ವದಲ್ಲಿರುವ ಮಂಟೂರು ಏತ ನೀರಾವರಿ ಯೋಜನೆಯಿಂದ ಗಲಗಲಿ ಬ್ಯಾರೇಜ್ದವರೆಗೆ ಪೈಪ್ಲೈನ್ ಜೋಡಣೆ ಮಾಡುವುದರಿಂದ ಬೇಸಿಗೆಯ ದಿನದಲ್ಲಿ ರೈತರಿಗೆ, ಜನ-ಜಾನುವಾರುಗಳಿಗೆ ನೀರಿನ ತೊಂದರೆ ಕಡಿಮೆಯಾಗುತ್ತದೆ. ಇದರಿಂದ ಸುಮಾರು 50 ರಿಂದ 60 ಹೆಚ್ಚು ಗ್ರಾಮಗಳಿಗೆ ನೀರಿನ ಸೌಲಭ್ಯ ಕಲ್ಪಿಸಿದಂತಾಗುತ್ತದೆ , ಅಂದಾಜು 440 ಲಕ್ಷ ವೆಚ್ಚದ ಕಾಮಗಾರಿಗೆ ಹಣ ಖರ್ಚಾಗಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿದರು, ಆದ್ದರಿಂದ ಕಾಮಗಾರಿಕೆಗೆ ಮಂಜೂರಾತಿ ನೀಡಬೇಕೆಂದು ಮನವಿ ಮಾಡಿದರು.
ಜಲಸಂಪನ್ಮೂಲ ಸಚಿವರು ಕಾಮಗಾರಿ ಪರೀಶೀಲಿಸಿ ವರದಿ ನೀಡಲು ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ಮಾಜಿ ಶಾಸಕ ಆನಂದ ನ್ಯಾಮಗೌಡ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 