ಸಾವರ್ಕರ್ ಬಗ್ಗೆ ಅವಮಾನ ಖಂಡಿಸಿ ಕೇಂದ್ರಕ್ಕೆ ಮನವಿ
ಗುಳೇದಗುಡ್ಡ: ಕಾಂಗ್ರೆಸ್ಸಿನ ಸೇವಾದಳದ ಕಿರು ಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಇವರ ಕುರಿತು ಘೋರ ಅವಮಾನ ಮಾಡಲಾಗಿದೆ ಎಂದು ಅದನ್ನು ಖಂಡಿಸಿ ಹಿಂದೂ ಜನಜಾಗ್ರತಿ ಸಮಿತಿಯ ಪದಾಧಿಕಾರಿಗಳು ಪಟ್ಟಣದಲ್ಲಿ ತಹಶೀಲ್ದಾರರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹಿಂದೂ ಜನಜಗ್ರತಿ ಸಮಿತಿ ಪದಧಿಕಾರಿಗಳು ತಹಶೀಲ್ದಾರ ಕಚೇರಿಗೆ ಆಗಮಿಸಿ, ಸಾವರ್ಕರ್ ಅವರಿಗೆ ಸೇವಾದಳದ ಪುಸ್ತಕದಲ್ಲಿ ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂದು ಅದನ್ನು ಖಂಡಿಸಿ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕ ಭುವನೇಶ ಪೂಜಾರ ಮಾತನಾಡಿ, ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಪ್ರತಿಮ ವೀರ ಸಾವರ್ಕರ್ ಅವರ ಬಗ್ಗೆ ಅವಹೇಳನಕಾರಿಯಾದ ಬರಹ ಸಲ್ಲದು. ಇದನ್ನು ದೇಶ ಕ್ಷಮಿಸಲಾರದು. ಈ ಬರಹವನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಮನವಿ ಸಲ್ಲಿಸಿದರು.
ಮುತ್ತು ಚಿಕ್ಕನರಗುಂದ, ಭುವನೇಶ ಪೂಜಾರ, ಮಹಾಂತೇಶ ಹಿರೇಮಠ, ಅಶೋಕ ಗೌಡರ್, ಹುಚ್ಚಪ್ಪ ಹುಳಿಪಲ್ಲೇದ, ಅಂಬರೀಶ ಯಳಮೇಲಿ ಸೇರಿದಂತೆ ಇನ್ನೂ ಅನೇಕರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 