ಸಾವರ್ಕರ್ ಬಗ್ಗೆ ಅವಮಾನ ಖಂಡಿಸಿ ಕೇಂದ್ರಕ್ಕೆ ಮನವಿ
ಗುಳೇದಗುಡ್ಡ: ಕಾಂಗ್ರೆಸ್ಸಿನ ಸೇವಾದಳದ ಕಿರು ಪುಸ್ತಕದಲ್ಲಿ ಸ್ವಾತಂತ್ರ್ಯ ಹೋರಾಟಗಾರ ಸಾವರ್ಕರ್ ಇವರ ಕುರಿತು ಘೋರ ಅವಮಾನ ಮಾಡಲಾಗಿದೆ ಎಂದು ಅದನ್ನು ಖಂಡಿಸಿ ಹಿಂದೂ ಜನಜಾಗ್ರತಿ ಸಮಿತಿಯ ಪದಾಧಿಕಾರಿಗಳು ಪಟ್ಟಣದಲ್ಲಿ ತಹಶೀಲ್ದಾರರ ಮುಖಾಂತರ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಹಿಂದೂ ಜನಜಗ್ರತಿ ಸಮಿತಿ ಪದಧಿಕಾರಿಗಳು ತಹಶೀಲ್ದಾರ ಕಚೇರಿಗೆ ಆಗಮಿಸಿ, ಸಾವರ್ಕರ್ ಅವರಿಗೆ ಸೇವಾದಳದ ಪುಸ್ತಕದಲ್ಲಿ ಅವಹೇಳನಕಾರಿಯಾಗಿ ಬರೆಯಲಾಗಿದೆ ಎಂದು ಅದನ್ನು ಖಂಡಿಸಿ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಮಿತಿಯ ಸಂಚಾಲಕ ಭುವನೇಶ ಪೂಜಾರ ಮಾತನಾಡಿ, ಈ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಪ್ರತಿಮ ವೀರ ಸಾವರ್ಕರ್ ಅವರ ಬಗ್ಗೆ ಅವಹೇಳನಕಾರಿಯಾದ ಬರಹ ಸಲ್ಲದು. ಇದನ್ನು ದೇಶ ಕ್ಷಮಿಸಲಾರದು. ಈ ಬರಹವನ್ನು ಹಿಂಪಡೆಯಬೇಕೆಂದು ಕೇಂದ್ರ ಸರ್ಕಾರವನ್ನು ಆಗ್ರಹಿಸಿ ಮನವಿ ಸಲ್ಲಿಸಿದರು.
ಮುತ್ತು ಚಿಕ್ಕನರಗುಂದ, ಭುವನೇಶ ಪೂಜಾರ, ಮಹಾಂತೇಶ ಹಿರೇಮಠ, ಅಶೋಕ ಗೌಡರ್, ಹುಚ್ಚಪ್ಪ ಹುಳಿಪಲ್ಲೇದ, ಅಂಬರೀಶ ಯಳಮೇಲಿ ಸೇರಿದಂತೆ ಇನ್ನೂ ಅನೇಕರು ಇದ್ದರು.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 