ಆಶಾ ಕಾರ್ಯಕರ್ತರನ್ನು ಕೆಲಸದಿಂದ ವಜಾ ಗೊಳಿಸುವ ಕುರಿತು ಜಿಲ್ಲಾಧ್ಯಕ್ಷೆ ಭುವನಾ ಅವರಿಗೆ ಮನವಿ
Appeal to District President Bhuvana regarding dismissal of ASHA workers
ಹುಬ್ಬಳ್ಳಿ 30: ಎಐಯುಟಿಯುಸಿ ಗೆ ಸೇರಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಮಿತಿ ಯ ಮುಖಂಡರ ಜೊತೆಗೆ ಇಂದು ಕಲಘಟಗಿಯ ತಮ್ಮ ನಿವಾಸದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಸಂತೋಷ್ ಲಾಡ್ ಅವರು ಮಾತನಾಡಿದರು. ಜಿಲ್ಲೆಯ ಆಶಾ ಕಾರ್ಯಕರ್ತರ ಸಮಸ್ಯೆಯನ್ನು ಆಲಿಸಿದ ಸಚಿವರು ತರ್ಕಬದ್ಧಗೊಳಿಸುವಿಕೆಯ ಕಾರಣ ನೀಡಿ ಆಶಾ ಕಾರ್ಯಕರ್ತರನ್ನು ಕೆಲಸದಿಂದ ವಜಾ ಗೊಳಿಸುವ ಬಗ್ಗೆ ಆತಂಕ ನಿವಾರಿಸುವ ನಿಟ್ಟಿನಲ್ಲಿ ನಾಳೆ ಡಿಸಿ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು. ನಿಮ್ಮ ಜೊತೆಗೆ ನಾನಿದ್ದೇನೆ ಎಂಬ ಭರವಸೆ ನೀಡಿದರು.
ಈ ಹಿನ್ನೆಲೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷೆ ಭುವನಾ ಬಳ್ಳಾರಿ ಸಚಿವರ ಮಧ್ಯಪ್ರವೇಶಕ್ಕೆ ಆಗ್ರಹಿಸಿ ಅವರ ಆಪ್ತ ಸಹಾಯಕರಿಗೆ ಮನವಿ ಪತ್ರ ನೀಡಿದ್ದು ಅದರಂತೆ ಅವರು ಸಭೆ ಕರೆಯದಾಗಿ ಹೇಳಿರುವುದು ಆಶಾದಾಯಕ ಬೆಳವಣಿಗೆಯಾಗಿದೆ. ಮಾನ್ಯ ಸಚಿವರು ಜಿಲ್ಲೆಯ ಆಶಾ ಕಾರ್ಯಕರ್ತೆಯರ ಆತಂಕ ದೂರ ಮಾಡುತ್ತಾರೆ ಎಂಬ ಭರವಸೆ ಇದೆ. ಈ ಸಭೆಯ ಫಲಿತಾಂಶದ ಆಧಾರದ ಮೇಲೆ ಮುಂದಿನ ನಡೆಯನ್ನು ನಿರ್ಧರಿಸಲಾಗುವುದು, ಎಂದರು.ನಿಯೋಗದಲ್ಲಿ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ, ಆಶಾ ಸಂಘದ ಜಿಲ್ಲಾ ಉಪಾಧ್ಯಕ್ಷರಾದ ಶೋಭಾ ಹಿರೇಮಠ, ಮಂಜುಳಾ ಗಾಡುಗೋಳಿ, ನಂದಾ ದೊಡ್ಡಮನಿ, ಮುಖಂಡರಾದ ಶೋಭಾ ಸಂತಭಾನವರ, ಶೀಲಾ ಭಾಗೋಡ, ರೇಣುಕಾ ಪಾಟೀಲ್, ಜಾಹಿರಾ, ಮಂಜುಳಾ, ಅಂಜನಾ, ಬಸಮ್ಮ ಇನ್ನೂ ಮುಂತಾದವರು ಇದ್ದರು
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 