ರೈತರ ವಿವಿಧ ಸಮಸ್ಯೆಗಳ ಇತ್ಯರ್ಥಕ್ಕೆ ಆಗ್ರಹಿಸಿ ತಹಶೀಲ್ದಾರರಿಗೆ ಮನವಿ
Appeal to Tahsildars demanding resolution of various problems of farmers
ಲೋಕದರ್ಶನ ವರದಿ
ಮುಂಡಗೋಡ 28 : ತಾಲೂಕಿನ ರೈತರು ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳನ್ನು ತಕ್ಷಣವೇ ಬಗೆಹರಿಸಬೇಕೆಂದು ಆಗ್ರಹಿಸಿ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ತಾಲೂಕು ತಹಶೀಲ್ದಾರರ ಮೂಲಕ ಜಿಲ್ಲಾಧಿಕಾರಿಗಳಿಗೆ ಹಾಗೂ ಕೃಷಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು. ಬೆಳೆ ವಿಮೆ ಪಾವತಿ: 2025ರ ಮುಂಗಾರು ಹಂಗಾಮಿನಲ್ಲಿ ಗೋವಿನ ಜೋಳದ ಬೆಳೆ ಸಂಪೂರ್ಣ ನಷ್ಟವಾಗಿದ್ದು, ವಿಮಾ ಕಂಪನಿಗಳಿಂದ ತಕ್ಷಣವೇ ಬೆಳೆ ವಿಮೆ ಪರಿಹಾರ ಕೊಡಿಸಬೇಕು.
ರಸಗೊಬ್ಬರ ಕಪ್ಪು ಮಾರುಕಟ್ಟೆ ತಡೆ: ಮಾರುಕಟ್ಟೆಯಲ್ಲಿ ಡಿ.ಎ.ಪಿ (ಆಂಕ) ಗೊಬ್ಬರದ ಕೃತಕ ಅಭಾವ ಸೃಷ್ಟಿಸಿ, ಅದರೊಂದಿಗೆ ಬೇಡದ ಓಷಧಿಗಳನ್ನು ಕಡ್ಡಾಯವಾಗಿ ಖರೀದಿಸುವಂತೆ (ಲಿಂಕ್ ಸೇಲ್) ಒತ್ತಾಯಿಸುತ್ತಿರುವ ಅಂಗಡಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು.ಡೀಸೆಲ್ ಪೂರೈಕೆ: ಬಿತ್ತನೆ ಕಾರ್ಯಕ್ಕಾಗಿ ರೈತರು ತರುವ ಕ್ಯಾನ್ಗಳಿಗೆ ಮುಕ್ತವಾಗಿ ಡೀಸೆಲ್ ನೀಡುವಂತೆ ಬಂಕ್ ಮಾಲೀಕರಿಗೆ ಸೂಚಿಸಬೇಕು.
ಕಮರ್ಷಿಯಲ್ ಸಿಲಿಂಡರ್ ಅಭಾವ: ವಾಣಿಜ್ಯ ಗ್ಯಾಸ್ ಸಿಲಿಂಡರ್ಗಳ ಕೊರತೆಯಿಂದ ಹೋಟೆಲ್ ಉದ್ಯಮ ಸಂಕಷ್ಟದಲ್ಲಿದ್ದು, ಸಕಾಲಕ್ಕೆ ಸಿಲಿಂಡರ್ ಪೂರೈಸಲು ಏಜೆನ್ಸಿಗಳಿಗೆ ಆದೇಶಿಸಬೇಕು. ಈ ಸಂದರ್ಭದಲ್ಲಿ ಹಸಿರು ಸೇನೆಯ ತಾಲೂಕಾ ರೈತ ಸಂಘದ ಮುಖಂಡರು ಹಾಗೂ ಕಾರ್ಯಕರ್ತರು ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 