ಸರ್ಕಾರಿ ಶಾಲೆಗಳ ಉನ್ನತಿಕರಣಕ್ಕೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಮನವಿ
Appeal to Union Minister H.D. Kumaraswamy for the upgradation of government schools
ಕಂಪ್ಲಿ 06: ತಾಲ್ಲೂಕಿನ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕೆ ಎನ್ಎಂಡಿಯ ಸಿಎಸ್ಆರ್ ನಿಧಿಯಲ್ಲಿ ಹಣವನ್ನು ಒದಗಿಸಲು ಶಿಫಾರಸ್ಸು ಮಾಡುವಂತೆ ಆಗ್ರಹಿಸಿ, ಕಂಪ್ಲಿಯ ಜೆಡಿಎಸ್ ಮುಖಂಡರಾ ಉಳೇನೂರು ಶಬ್ಬೀರ್ ಬೆಂಗಳೂರಿನಲ್ಲಿ ಕೇಂದ್ರ ಕೈಗಾರಿಕಾ ಸಚಿವರಾದ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು. ಮನವಿ ಸಲ್ಲಿಸಿದ ನಂತರ ಮಾತನಾಡಿದ ಉಳೇನೂರು ಶಬ್ಬೀರ್ ಸಂಡೂರು ತಾಲ್ಲೂಕಿನ ದೋಣಿಮಲೆ ಎನ್ಎಂಡಿಸಿ ಸಂಸ್ಥೆಯ ಸಿಎಸ್ಆರ್ (ಸಾಮಾಜಿಕ ಹೊಣೆಗಾರಿಕೆ) ನಿಧಿಯಲ್ಲಿ ಕಂಪ್ಲಿ, ಹೊಸಪೇಟೆ, ಹಗರಿಬೊಮ್ಮನಹಳ್ಳಿ ತಾಲ್ಲೂಕುಗಳ ಸರ್ಕಾರಿ ಶಾಲೆಗಳ ಉನ್ನತೀಕರಣಕ್ಕಾಗಿ ಪ್ರತಿ ತಾಲ್ಲೂಕಿಗೆ 5ಕೋಟಿ ರೂಗಳನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿಗೆ ಎನ್ಎಂಡಿಗೆ ಶಿಫಾರಸ್ಸು ಮಾಡುವಂತೆ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರು ಈ ಬಗ್ಗೆ ಬಳ್ಳಾರಿ ಜಿಲ್ಲಾಧಿಕಾರಿಗಳಿಗೆ ಸೂಚಿಸುವುದಾಗಿ ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮುಖಂಡರಾದ ಮಹ್ಮದ್ ಜಾಕೀರ್, ವಿನೋದ್, ಆಮ್ಜದ್ ಸೇರಿದಂತೆ ಇತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 