ಕರ್ನಾಟಕ ರಾಜ್ಯೋತ್ಸವವನ್ನು ಉತ್ಸಾಹದಿಂದ ಆಚರಿಸಲು ಮನವಿ
Appeal to celebrate Karnataka Rajyotsava with enthusiasm
ಸಂಬರಗಿ 30: ನವೆಂಬರ್ 1 ರಂದು ನಡೆಯುವ ಕರ್ನಾಟಕ ರಾಜ್ಯೋತ್ಸವದ ಸಂದರ್ಭದಲ್ಲಿ, ಗಡಿ ಭಾಗದ ಗ್ರಾಮಗಳಲ್ಲಿ ಗ್ರಾಮ ಪಂಚಾಯತ್ ಅಧಿಕಾರಿ, ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಎಲ್ಲಾ ಸದಸ್ಯರು ಗ್ರಾಮ ಪಂಚಾಯತ್ಗಳಲ್ಲಿ ಹಾಜರಿದ್ದು, ಉತ್ಸಾಹದಿಂದ ಆಚರಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣ್ಣದ,ಅಥಣಿ ತಾಲೂಕು ಅಧ್ಯಕ್ಷ ಉದಯ್ ಮಕಾನೆ ಮನವಿ ಮಾಡಿದರು.
ಗಡಿ ಪ್ರದೇಶದ ಅನೇಕ ಗ್ರಾಮಗಳಲ್ಲಿ ಭೇಟಿ ನೀಡಿದ ನಂತರ, ಸಂಬರಗಿ ಗ್ರಾಮದಲ್ಲಿ ಮಾತನಾಡಿ ಅವರು ರಾಜ್ಯೋತ್ಸವವನ್ನು ಪ್ರತಿ ಗ್ರಾಮದಲ್ಲಿ ಉತ್ಸಾಹದಿಂದ ಆಚರಿಸಬೇಕು. ಪ್ರತಿ ಗ್ರಾಮದಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡುವಂತೆ ತಾಲೂಕು ಆಡಳಿತ ಆದೇಶ ನೀಡಿದೆ. ಈ ಕಾರ್ಯಕ್ರಮಕ್ಕೆ ಗೈರುಹಾಜರಾದ ಮತ್ತು ನಿರ್ಲಕ್ಷ್ಯ ವಹಿಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ನಾವು ಜಿಲ್ಲಾಡಳಿತವನ್ನು ವಿನಂತಿಸುತ್ತಿದ್ದೇವೆ. ಕೀರಿಯ ಹಿರಿಯ ಪ್ರಾಥಮಿಕ, ಮತ್ತು ಪ್ರೌಢಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನಡೆಸಬೇಕೆಂದು ಸೂಚನೆ ನೀಡಲಾಗಿದೆ ಎಂದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 