ತಡವಲಗಾ ಸೇರಿದಂತೆ ವಿವಿಧ ಗ್ರಾಮಗಳ ಕೆರೆ ತುಂಬಿಸಲು ಮನವಿ
Appeal to fill the lakes of various villages including Tadavalaga
ತಡವಲಗಾ ಸೇರಿದಂತೆ ವಿವಿಧ ಗ್ರಾಮಗಳ ಕೆರೆ ತುಂಬಿಸಲು ಮನವಿ
ಇಂಡಿ, 05: ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಕೆರೆ ಸೇರಿದಂತೆ ಇಂಡಿ ತಾಲ್ಲೂಕಿನ ಎಲ್ಲಾ ಕೆರೆಗಳನ್ನು ಶೀಘ್ರದಲ್ಲೇ ತುಂಬಿಸಬೇಕು ಎಂದು ಭಾರತೀಯ ಕಿಸಾನ್ ಸಂಘದ ಕರ್ನಾಟಕ ರಾಜ್ಯ ಕಾರ್ಯಕಾರಣಿ ಸದಸ್ಯರಾದ ಗುರುನಾಥ ಬಗಲಿ ಅವರ ನೇತೃತ್ವದಲ್ಲಿ ಇಂಡಿ ತಾಲೂಕು ಉಪವಿಭಾಗಾಧಿಕಾರಿ ಅನುರಾಧ ವಸ್ರೃದ ಅವರಿಗೆ ಮನವಿ ಸಲ್ಲಿಸಲಾಯಿತು. ನಂತರ ಮಾತನಾಡಿದ ಗುರುನಾಥ ಬಗಲಿ ಅವರು ಇಂಡಿ ತಾಲ್ಲೂಕಿನ ಬೇಸಿಗೆ ರಣ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ ಜನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆಯಾಗುವ ಮುನ್ನ ಕಾಲೂವೇ ಕೊನೆಯಲ್ಲಿರುವ ಇಂಡಿ ತಾಲ್ಲೂಕಿನ ತಡವಲಗಾ ಕೆರೆಯನ್ನು ತಕ್ಷಣ ತುಂಬಿಸಬೇಕು ಹಾಗೂ ಇಂಡಿ ಹಾಗೂ ಚಡಚಣ ತಾಲ್ಲೂಕಿನ 19 ಕೆರೆಗಳಿಗೆ ತಿಡಗುಂದಿ ಬ್ರಾಂಚ್ ಕಾಲುವೆ ನೀರು ತುಂಬಿಸಬೇಕು. ಭುಯ್ಯಾರ ಏತ ನೀರಾವರಿ ಆರಂಭದಿಂದ ಪೈಪುಗಳು ಒಡೆದಿದ್ದು ಅವುಗಳನ್ನು ಬದಲಾಯಿಸಿ ಸರಿಪಡಿಸಬೇಕು.ಇಂಡಿ ತಾಲ್ಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಹವಾಮಾನ ವೈಪರೀತ್ಯದಿಂದ ತೋಗರಿ ಬೆಳೆ ಹಾಳಾಗಿದ್ದು ಬೀಮಾ ಫಸಲು ಯೋಜನೆ ಅಡಿಯಲ್ಲಿ ಬೆಳೆ ವಿಮೆ ಹಣವನ್ನು ಎಲ್ಲಾ ರೈತರಿಗೆ ಸಿಗಬೇಕು ಹಾಗೂ ಎಲ್ಲಾ ರೈತರಿಗೆ ಪರಿಹಾರ ನೀಡಬೇಕು. ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಸಬೇಕು ಎಂದು ಇಂಡಿ ಉಪವಿಭಾಗಾಧಿಕಾರಿ ಅನುರಾಧ ವಸ್ರೃದ ಅವರಿಗೆ ಮನವಿ ಸಲ್ಲಿಸಿದರು.ಈ ಭಾರತೀಯ ಕಿಸಾನ್ ಸಂಘದ ಜಿಲ್ಲಾ ಅಧ್ಯಕ್ಷರಾದ ಮಲ್ಲನಗೌಡ ಪಾಟೀಲ, ಇಂಡಿ ತಾಲೂಕು ಕಿಸಾನ್ ಸಂಘದ ಅಧ್ಯಕ್ಷರಾದ ಈರಣ್ಣ ಗೋಟ್ಯಾಳ,ಶಿವಶರಣ ನಾವಿ, ಶರಣು ತಾರಾಪೂರ,ಯಮನೂರ ಖಸ್ಕಿ, ಚನ್ನಪ್ಪ ಮಿರಗಿ, ಈರಣ್ಣ ಬಿರಾದಾರ, ಮಲ್ಲಿಕಾರ್ಜುನ ನೇಕಾರ,ಚಂದಪ್ಪ ಡೊಂಬರ, ಚಂದಪ್ಪ ಮಿರಗಿ, ಚಿದಾನಂದ ಮದರಿ, ದುಂಡಪ್ಪ ಕರಕಟ್ಟಿ, ಶಾಂತಪ್ಪ ಪೂಜಾರಿ, ಶಿವಲಿಂಗಪ್ಪ ಕಟ್ಟಿ ಸೇರಿದಂತೆ ಅನೇಕರು ರೈತರು ಉಪಸ್ಥಿತರಿದ್ದರು
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 