ಇಂಡಸ್ಟ್ರಿ, ಕಂಪನಿಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯಕ್ಕೆ ಮನವಿ
Appeal to make Rajyotsava celebrations mandatory in industry and companies
ಇಂಡಸ್ಟ್ರಿ, ಕಂಪನಿಗಳಲ್ಲಿ ರಾಜ್ಯೋತ್ಸವ ಆಚರಣೆ ಕಡ್ಡಾಯಕ್ಕೆ ಮನವಿ
ಬೆಳಗಾವಿ 27: ಕೈಗಾರಿಕಾ ಪ್ರದೇಶಗಳಲ್ಲಿ ಹಾಗೂ ಕಂಪನಿಗಳಲ್ಲಿ ಭುವನೇಶ್ವರಿ ಪೂಜೆ ಸಲ್ಲಿಸುವ ಮೂಲಕ ಕರ್ನಾಟಕ ರಾಜ್ಯೋತ್ಸವ ಆಚರಣೆಯನ್ನು ಕಡ್ಡಾಯಗೊಳಸಬೇಕೆಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಅರ್ಿಸಿತು. ಮನವಿಯಲ್ಲಿ ಬೆಳಗಾವಿ ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿರುವ ಹಲವು ಇಂಡಸ್ಟ್ರಿಗಳು ಹಾಗೂ ಕಂಪನಿಗಳಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಆಚರಿಸುವ ಪರಂಪರೆ ಕಾಣಿಸಿಕೊಂಡಿಲ್ಲ ಆದ್ದರಿಂದ ನವೆಂಬರ 1ರಂದು ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಪ್ರತಿಯೊಂದು ಇಂಡಸ್ಟ್ರಿ ಮತ್ತು ಕಂಪನಿಗಳಲ್ಲಿ ಕನ್ನಡ ತಾಯಿ ಭುವನೇಶ್ವರಿಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ರಾಜ್ಯೋತ್ಸವ ಆಚರಿಸುವಂತೆ ಜಿಲ್ಲಾಡಳಿತದಿಂದ ಆದೇಶ ಹೊರಡಿಸಬೇಕೆಂದು ಕೋರಲಾಗಿದೆ. ಈ ಕ್ರಮದಿಂದ ಕನ್ನಡದ ಗೌರವ ಹೆಚ್ಚಿ ರಾಜ್ಯೋತ್ಸವದ ಆತ್ಮವನ್ನು ಪ್ರತಿಯೊಬ್ಬ ಉದ್ಯೋಗಸ್ಥರ ಮನಗಳಲ್ಲಿ ಬೇರೂರಿಸುವಲ್ಲಿ ಸಹಕಾರಿಯಾಗುತ್ತದೆ ಎಂದು ತಿಳಿಸಲಾಗಿದೆ. ಈ ಸಮಯದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ಯುವಸೇನೆ ಜಿಲ್ಲಾಧ್ಯಕ್ಷ ಬಾಳಪ್ಪ ಬಿ. ಗುಡೆಗನಟ್ಟಿ, ಸಂಘದ ಪದಾಧಿಕಾರಿಗಳು ಮತ್ತು ಕನ್ನಡಾಭಿಮಾನಿಗಳು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 