ಶತಮಾನದ ಇತಿಹಾಸವಿರುವ ಶಾಲೆಯ ಕೊಠಡಿಗಳಿಗೆ ದುರಸ್ತಿ ಅನುದಾನ ಬಿಡುಗಡೆ ಮಾಡುವಂತೆ ಮನವಿ
Appeal to release repair grant for school rooms with a century-old history
ಯರಗಟ್ಟಿ 14 : ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಮಕ್ಕಳ ದಾಖಲಾತಿ ಹೊಂದಿರುವ ಹಾಗೂ ಒಂದೂವರೆ ಶತಮಾನದ ಇತಿಹಾಸವಿರುವ ಪಟ್ಟಣದ ಸರ್ಕಾರಿ ಕನ್ನಡ ಮಾದರಿ ಪ್ರಾಥಮಿಕ ಶಾಲೆಯ ಕೊಠಡಿಗಳಿಗೆ ದುರಸ್ತಿ ಅನುದಾನ ಬಿಡುಗಡೆ ಮಾಡುವಂತೆ ಶಾಲಾ ಎಸ್.ಡಿ.ಎಮ್.ಸಿ ಅಧ್ಯಕ್ಷ ಹಾಗೂ ಸದಸ್ಯರು ಶನಿವಾರ ಶಾಸಕ ವಿಶ್ವಾಸ ವೈದ್ಯ ಅವರಿಗೆ ಮನವಿ ಸಲ್ಲಿಸಿದರು. ಇಲ್ಲಿ 1ರಿಂದ 8ನೇ ತರಗತಿಯ ವರೆಗೆ ಒಟ್ಟು 550 ವಿದ್ಯಾರ್ಥಿಗಳು ಓದುತ್ತಿದ್ದಾರೆ.
ಇಲ್ಲಿರುವ ಮಕ್ಕಳ ಸಂಖ್ಯೆಗೆ ಅನುಗುಣವಾಗಿ ಮೂಲ ಸೌಕರ್ಯ ಸಿಗದೆ ವಂಚಿತರಾಗಿದ್ದಾರೆ. ಕೊಠಡಿಗಳು ಸಂಪೂರ್ಣ ಶಿಥಿಲಗೊಂಡ ಬಗ್ಗೆ ಪಾಲಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.ಕ್ಷೇತ್ರ ಶಿಕ್ಷಣಾಧಿಕಾರಿ ಎ. ಎ. ಖಾಜಿ ಶಾಲೆಗೆ ಭೇಟಿ ನೀಡಿ ಶಾಲೆಯ ಪ್ರಸ್ತುತ ಶೈಕ್ಷಣಿಕ ವರ್ಷದಿಂದ ಈ ಶಾಲೆಯಲ್ಲಿ ಎಲ್.ಕೆ.ಜಿ ಮತ್ತು ಯುಕೆಜಿ ತರಗತಿಗಳು ಮಂಜುರಾಗಿದ್ದು ಸದ್ಯ ಎರಡು ಕೊಠಡಿಗಳ ಮತ್ತು ಮೇನ್ ಗೇಟ್ ದುರಸ್ತಿ ಕಾಮಗಾರಿ ಮಾಡಬೇಗಾಗಿದೆ ಎಂದು ಹೇಳಿದರು.
ಶಾಸಕ ವಿಶ್ವಾಸ ವೈದ್ಯ ಮನವಿ ಸ್ವೀಕರಿಸಿ ಮಾತನಾಡಿದ ಅವರು ಅಷ್ಟೇ ಅಲ್ಲದೆ ಶತಮಾನಗಳ ಕಂಡ ಶಾಲೆಗಳ ಅಭಿವೃದ್ಧಿಗೆ ದೊರೆಯುತ್ತಿರುವ ವಿಶೇಷ ಅನುದಾನವೂ ದೊರೆಯಲಿದ್ದು, ಆ ಹಣವನ್ನೂ ಕೊಠಡಿಗಳ ದುರಸ್ತಿಗೆ ಬಳಸಲಾಗುವುದು ಎಂದು ಮಾಹಿತಿ ನೀಡಿದರು.ಈ ವೇಳೆ ಪ. ಪಂ. ಸದಸ್ಯ ನಿಖಿಲ ಪಾಟೀಲ, ಎಸ್.ಡಿ.ಎಮ್.ಸಿ ಅಧ್ಯಕ್ಷ ಲಕ್ಕಪ್ಪ ಜಗದಾರ, ಉಪಾಧ್ಯಕ್ಷ ಸುನಿತಾ ಹಿರೇಮಠ, ಮುಖ್ಯೋಪಾಧ್ಯಾಯರಾದ ಎ.ಎ. ಮಕ್ತುಮನವರ, ಎಸ್.ಡಿ.ಎಂ.ಸಿ ಸದಸ್ಯರಾದ ದುಂಡಯ್ಯ ಹಿರೇಮಠ, ವಿಜಯ ಬಡಿಗೇರ , ಫಿರೋಜ ಖಾದ್ರಿ, ಹುಸೇನ ದಿಲಾವರನಾಯ್ಕ, ಮುದುಕಪ್ಪ ತಡಸಲೂರು, ಲಕ್ಷ್ಮಣ ಹಣಬರ, ಲಕ್ಷ್ಮಿ ಸುರೇಬಾನ, ರತ್ನಾ ಹಡಪದ, ಪ್ರೇಮಾ ಹೂಲಿಕಟ್ಟಿ, ಮೀನಾಕ್ಷಿ ಮದ್ದಾನಿ, ಶಕುಂತಲಾ ಹಡಪದ ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 