ಸರ್ಕಾರಿ ಗೋಶಾಲೆ ಪ್ರಾರಂಭಿಸಲು ಮನವಿ
Appeal to start government cow shelter
ಜಮಖಂಡಿ 05: ನಗರದಲ್ಲಿ ಸರ್ಕಾರದಿಂದ ಗೋಶಾಲೆಯನ್ನು ಪ್ರಾರಂಭಿಸುವಂತೆ ನಗರದ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಉಪವಿಭಾಗಾಧಿಕಾರಿ ಶ್ವೇತಾ ಬೀಡಿಕರ, ಪೌರಾಯುಕ್ತ ಜ್ಯೋತಿ ಗೀರೀಶ, ಅವರಿಗೆ ಮನವಿ ಸಲ್ಲಿಸಿದರು.
ಓಲೆಮಠದ ಆನಂದ ದೇವರು ಮಾತನಾಡಿ, ನಗರದಲ್ಲಿ ತರಕಾರಿ ಮಾರಾಟ ಮಾಡಿ ಉಳಿದಿರುವ ತರಕಾರಿಯನ್ನು ರಸ್ತೆಯ ಮೇಲೆ ಎಸೆದು ಹೋಗುತ್ತಾರೆ. ಬಿದ್ದಿರುವ ತರಕಾರಿಗಳನ್ನು ತಿನ್ನಲು ದನ, ಕರಗಳು ಬರುತ್ತವೆ. ಇದರಿಂದ ಸಾರ್ವಜನಿಕರಿಗೆ ಬಹಳಷ್ಟು ತೊಂದರೆ ಆಗುತ್ತಿದೆ. ನಮ್ಮ ಸುತ್ತಮುತ್ತಲಿನ ತಾಲೂಕಿನಲ್ಲಿ ಗೋಶಾಲೆ ಇಲ್ಲವಾದ್ದರಿಂದ ನಗರದಲ್ಲಿ ಗೋಶಾಲೆ ನಿರ್ಮಾಣ ಮಾಡಲೇಬೇಕು ಎಂದು ಮನವಿ ಮಾಡಿದರು.
ನಾಗರಿಕ ಹಿತರಕ್ಷಣ ಸಂಘ, ಲೈನ್ಸ್ ಸೇವಾ ಸಂಸ್ಥೆ, ಸಿವಿಲ್ ಇಂಜಿನಿಯರ್ ಅಸೋಸಿಯನ್, ಸ್ತ್ರೀ ಶಕ್ತಿ ಸಂಘ, ಶ್ರೀ ಬಸವೇಶ್ವರ ವ್ಯಾಪಾರಸ್ಥರ ಸಂಘ, ಶ್ವೇತಾಂಬರ ಜೈನ ಟ್ರಸ್ಟ್, ತಾಲೂಕ ಬ್ರಾಹ್ಮಣ ಸಂಘ, ಭಾರತೀಯ ಸ್ವರಾಜ್ಯ ಸಂಸ್ಥೆ, ರಾಮತೀರ್ಥ ರೋಟರಿ ಸಂಸ್ಥೆ, ಮಹೇಶ್ವರಿ ಮಹಿಳಾ ಮಂಡಲ, ಪ್ರಜಾಪಿತ ಬ್ರಹ್ಮಕುಮಾರಿ ವಿಶ್ವವಿದ್ಯಾಲಯ, ಬಸವ ಗ್ರಾಮೀಣ ಅಭಿವೃದ್ಧಿ ಸಂಘ ಕಡಪಟ್ಟಿ ಮುಂತಾದ ಸಂಘಟನೆಗಳ ಪದಾಧಿಕಾರಿಗಳಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 