ಒಳಮೀಸಲಾತಿ ಜಾರಿಗೊಳಿಸಲು ಮುಖ್ಯ ಮಂತ್ರಿಯವರಿಗೆ ಮನವಿ
Appeal to the Chief Minister to implement internal reservation
ಲೋಕದರ್ಶನ ವರದಿ
ಹಾವೇರಿ 25: ಒಳಮೀಸಲಾತಿ ಇಲ್ಲದೇ ಸರ್ಕಾರಿ ಖಾಲಿ ಹುದ್ದೆಗಳ ನೇಮಕ ಮಾಡಲು ಆದೇಶ ಹೊರಡಿಸಿರುವ ಸರ್ಕಾರದ ಕ್ರಮವನ್ನು ವಿರೋಧಿಸಿ ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿ ವತಿಯಿಂದ ಪ್ರತಿಭಟಿಸಿ ಅಪರ ಜಿಲ್ಲಾಧಿಕಾರಿಗಳಾದ ಡಾ.ನಾಗರಾಜಎಲ್ ಅವರ ಮೂಲಕ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಲಾಯಿತು.
ರಾಜ್ಯಾದ್ಯಂತ 35 ವರ್ಷಗಳಿಂದ ನಿರಂತರ ಹೋರಾಟ ನಡೆಸಿದ್ದೇವೆ.ಸುಪ್ರೀಂ ಕೋರ್ಟ್ ಪರಿಶಿಷ್ಟ ಮೀಸಲಾತಿ ವರ್ಗೀಕರಿಸಲುರಾಜ್ಯಕ್ಕೆ ಅವಕಾಶ ನೀಡಿತು.ರಾಜ್ಯ ಸರ್ಕಾರಗೌರವಾನ್ವಿತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಆಯೋಗ ರಚಿಸಿ ವರದಿ ಪಡೆದು ಸಚಿವ ಸಂಪುಟದಲ್ಲಿ ಅನುಮೋಧಿಸಿತು. ಆ ನಂತರ ವಿಧಾನ ಸಭೆ ಮತ್ತು ವಿಧಾನ ಪರಿಷತ್ತಿನಲ್ಲಿ ಮಸೂದೆ ಅಂಗೀಕರಿಸಿ ರಾಜ್ಯಪಾಲರ ಸಹಿ ನಂತರ ವಿಧೇಯಕವಾಗಿದೆ. ಕಾಂಗ್ರೆಸ್ ಸರ್ಕಾರ ಆರಂಭದಿಂದಲೂ ಒಳಮೀಸಲಾತಿ ವಿರೋಧಿಯಾಗಿದೆ.
ಸರ್ಕಾರ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಒಳಮೀಸಲಾತಿ ವಿರೋಧಿಗಳ ರಾಜಕೀಯ ಒತ್ತಡದ ಪ್ರಭಾವಕ್ಕೆ ಒಳಗಾಗಿದ್ದಾರೆ. ಒಳಮೀಸಲಾತಿ ಜಾರಿ ಮಾಡಲು ವಿಶೇಷ ಸಚಿವ ಸಂಪುಟದ ದೀರ್ಘ ಚರ್ಚೆಯ ಅಗತ್ಯವಿಲ್ಲ ಯಾವ ಕೋರ್ಟ್ತಡೆಯಾಜ್ಞೆ ಹಾಗೂ ತಾಂತ್ರಿಕ ಆಡಚಣೆಗಳಿಲ್ಲ.ಅಡಚಣೆ ಇರುವುದು ಸರ್ಕಾರದಲ್ಲಿ ಆದ್ದರಿಂದ ಮುಖ್ಯಮಂತ್ರಿಗಳು ಸಮರ್ಥ ಹಾಗೂ ನಿಷ್ಟುರ ನಿರ್ಧಾರ ಮಾಡಬೇಕಿದೆ. ಹಲವಾರು ಹಕ್ಕೊತ್ತಾಯಗಳನ್ನು ಇದೇ ಅವಧಿಯಲ್ಲಿ ಒತ್ತಾಯಿಸಲಾಯಿತು.
ಈ ಸಂದರ್ಭದಲ್ಲಿ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ರಾಜ್ಯ ಸಂಘಟನಾ ಸಂಚಾಲಕರಾದ ಉಡಚಪ್ಪ ಮಾಳಗಿ,ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿ-ಪರಿಶಿಷ್ಟ ಪಂಗಡ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಮಿತಿಜಿಲ್ಲಾಧ್ಯಕ್ಷರಾದ ಮಂಜಪ್ಪ ಮರೋಳ,ಜಿಲ್ಲಾ ಮುಖಂಡರಾದ ಜಗದೀಶ ಹರಿಜನ,ಶಿವಲಿಂಗಪ್ಪ ನಿಂಗಪ್ಪನವರ,ಮಹೇಶಪ್ಪ ಶಾಕಾರ,ರಾಜಪ್ಪ ಸೋಮನಕಟ್ಟಿ, ವೆಂಕಟೇಶ ಹಾವನೂರ, ಪುನೀತ ಹಾವನೂರ,ಯಶವಂತ ಹಾವನೂರ,ನಿಂಗಪ್ಪ ಸೇರಿದಂತೆ ಪದಾಧಿಕಾರಿಗಳು ಹಾಗೂ ಸಂಘಟನೆಯ ಕಾರ್ಯಕರ್ತರು ಪಾಲ್ಗೊಂಡಿದ್ದರು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 