ವಾರ್ಡನಲ್ಲಿಯ ಹಲವಾರು ಸಮಸ್ಯೆಗಳ ಕುರಿತು ಮುಖ್ಯಾಧಿಕಾರಿಗೆ ಮನವಿ
ಲೋಕದರ್ಶನವರದಿ
ಮಹಾಲಿಂಗಪೂರ : ನಗರದ ವಾಡರ್ೊಂದರಲ್ಲಿಯ ಅವ್ಯವಸ್ಥೆಯ ಕುರಿತು ಸುವರ್ಣ ಮಹಿಳಾ ಸಂಘದ ಸದಸ್ಯರು ಹಾಗೂ ಸ್ಥಳೀಯ ಮಹಿಳೆಯರು ಸೇರಿ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಿದರು.
ನಗರದ 15 ನೆಯ ವಾರ್ಡ ಕಾವೇರಿ ಪ್ಲಾಟ ಜನನಿಬೀಡ ಪ್ರದೇಶವಾಗಿದೆ. ಬೀದಿ ದೀಪಗಳ ವ್ಯವಸ್ಥೆಯೂ ಸರಿಯಾಗಿಲ್ಲ ರಾತ್ರಿ ಹೊತ್ತಲ್ಲಿ ಮಹಿಳೆಯರಿಗೆ, ವೃದ್ಧರಿಗೆ, ಚಿಕ್ಕಮಕ್ಕಳಿಗೆ ಬೆಳಕಿನ ಕೊರತೆಯಿಂದ ತಿರುಗಾಡಲು ತೊಂದರೆಯಾಗುತ್ತಿದೆ.ಕುಡಿಯುವ ನೀರಿಗಾಗಿ ತೊಂದರೆಯಾಗದಂತೆ ಬೋರವೆಲ್ಲ ವ್ಯವಸ್ಥೆಯನ್ನು ಮಾಡಿ ಪರದಾಟ ತಪ್ಪಿಸಬೇಕಾಗಿದೆ.
ಈ ಭಾಗದಲ್ಲಿ ಸಾರ್ವಜನಿಕ ಶೌಚಾಲಯವಿಲ್ಲದೆ ನಾಗರೀಕರು ಬಯಲು ಸವಚ್ಛಕ್ಕೆ ಮೊರೆ ಹೋಗಬೇಕಾಗಿದೆ.
ಅಲ್ಲಲ್ಲಿ ಚರಂಡಿಯೊಳಗೆ ನೀರು ನಿಂತು ಹಾಗೂ ರಸ್ತೆ ತುಂಬ ಹರಿದು ಸೊಳ್ಳೆಗಳ ಕಾಟ ಮಿತಿ ಮೀರಿರುವುದರಿಂದ ಸಾಂಕ್ರಾಮಿಕ ಹಾಗೂ ಡೆಂಗ್ಯುಯಂತ ರೋಗಗಳಿಗೆ ಜನತೆಗೆ ತುತ್ತಾಗುವ ಭಯ ಕಾಡುತ್ತಿದೆ.
ಈ ಎಲ್ಲ ಸಮಸ್ಯೆಗಳಿಗೆ ಪುರಸಭೆ ಬೇಗ ಸ್ಪಂದಿಸಿ ಆಗುತ್ತಿರುವ ತೊಂದರೆ ನಿವಾರಿಸಲು ಸಂಘದ ಅಧ್ಯಕ್ಷೆ ಸುವರ್ಣ ಆಸಂಗಿ ಸ್ಥಳೀಯ ಮಹಿಳೆಯರಾದ ಲೀಲಾ ಕಲಾಲ,ಅನಿತಾ ಮುಳ್ಳುರ, ಸೀಮಾ ಮೂಡಲಗಿ, ಸವಿತ ಮುಗರ್ೊಡ್ ಕೋರಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 