ಬಿರುಗಾಳಿ ಮಳೆಗೆ ಬಗ್ಗಿದ ಗಿಡಗಳನ್ನು ಸಂರಕ್ಷಿಸಲು ಅರಣ್ಯ ಇಲಾಖೆಗೆ ಮನವಿ
Appeal to the Forest Department to protect trees damaged by storms
ಬಳ್ಳಾರಿ 26: ನಗರದ ಅನಂತಪುರ ರಸ್ತೆ ಬೈಪಾಸ್ನಿಂದ ವಿಆರ್ಎಲ್ ಗೋಡೌನ್ ಮೂಲಕ ಬೆಂಗಳೂರು ರಸ್ತೆಯವರೆಗೆ ಕಳೆದೊಂದು ವರ್ಷ ಹಿಂದೆ ಅರಣ್ಯ ಇಲಾಖೆ ವತಿಯಿಂದ ನೆಡಲಾಗಿದ್ದ ಹಲವು ಗಿಡಗಳು ಇತ್ತೀಚೆಗೆ ಸುರಿದ ಭಾರಿ ಬಿರುಗಾಳಿ ಮಳೆಯಿಂದ ಬಾಗಿರುವ ಘಟನೆ ಕಂಡುಬಂದಿದೆ. ಸುಮಾರು 20ರಿಂದ 30 ಗಿಡಗಳು ಬಗ್ಗಿ ಹಾನಿಗೊಳಗಾಗಿರುವುದರಿಂದ ಅವುಗಳನ್ನು ತಕ್ಷಣವೇ ನೆಟ್ಟಗೆ ನಿಲ್ಲಿಸಿ ಸಂರಕ್ಷಣೆ ಮಾಡುವಂತೆ ಸಮಾಜ ಸೇವಕ ಎಂ. ಶಂಕರ್ ಅವರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.
ಈ ಕುರಿತು ಮಾತನಾಡಿದ ಅವರು, ರಸ್ತೆ ಬದಿಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ನೆಡಲಾಗಿದ್ದ ಗಿಡಗಳು ಪರಿಸರ ಸಂರಕ್ಷಣೆಗೆ ಬಹಳ ಉಪಯುಕ್ತವಾಗಿದ್ದು, ಅವು ಹಾನಿಗೊಳಗಾಗದಂತೆ ಸಂಬಂಧಪಟ್ಟ ಅಧಿಕಾರಿಗಳು ಶೀಘ್ರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು. ಅಲ್ಲದೆ, ಗಿಡಗಳಿಗೆ ಅಗತ್ಯವಾದ ಬೆಂಬಲ ಕಂಬಗಳನ್ನು ಅಳವಡಿಸಿ ಪುನಃ ಸರಿಪಡಿಸಿದರೆ ಅವು ಬದುಕುಳಿಯಲು ಸಹಕಾರಿಯಾಗುತ್ತದೆ ಎಂದು ತಿಳಿಸಿದ್ದಾರೆ. ಈ ಸಂಬಂಧ ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಸ್ಥಳ ಪರೀಶೀಲನೆ ನಡೆಸಿ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕನ್ನಡಪರ ನಿರ್ಣಯಕ್ಕೆ ಹಿಂದೇಟು: ಮಹಾಪೌರರ ನಡೆ ಈಗ ಸಂಶಯಕ್ಕೆ ಯಡೆ
ಬೆಳಗಾವಿಯಲ್ಲಿ ಬಿಗ್ ಹಾಕಿದ ಮನೆಗಳಿಗೆ ಪೊಲೀಸ ಭದ್ರತೆ ವ್ಯವಸ್ಥೆಗೆ ಜನರ ಮೆಚ್ಚುಗೆ
ಬೆಳಗಾವಿಗೆ ಬಂದ 20 ಜನ ಬಾಂಗ್ಲಾದವರಲ್ಲ : ಬಂಗಾಳ ಮೂಲದ ಚಿನ್ನದಂಗಡಿ ಕೂಲಿ ಕಾರ್ಮಿಕರು
ಭೀಕರ ಅಪಘಾತಕ್ಕೆ ಓರ್ವ ಸಾವು : ಮೂವರಿಗೆ ಗಂಭೀರ ಗಾಯ
ಶವ ವಾಹನದಲ್ಲಿ ಹಾಳಾದ ಸ್ಟ್ರೆಚರ್ : ಶವ ಸಾಗಿಸಲು ನಾಗರಿಕರ ಪರದಾಟ : ಸ್ಟ್ರೆಚರ್ ಖರೀದಿಗೆ ಪುರಸಭೆಯಲ್ಲಿ ದುಡ್ಡು ಇಲ್ಲವಾ?
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್ 