ಏಕಲವ್ಯ ವಸತಿ ಶಾಲೆ ಸ್ಥಾಪನಿಗೆ ಮನವಿ
Appeal to the founder of Ekalavya Residential School
ಇಂಡಿ 17: ಜಿಲ್ಲೆಯಲ್ಲಿ ಕೇಂದ್ರೀಯ ಏಕಲವ್ಯ ವಸತಿ ಶಾಲೆ ಮಂಜೂರು ಮಾಡುವಂತೆ ಒತ್ತಾಯಿಸಿ ಬಿಜೆಪಿ ಎಸ್.ಟಿ. ಮೋರ್ಚಾ ಜಿಲ್ಲಾಧ್ಯಕ್ಷ ರವಿಕಾಂತ ವಗ್ಗಿ ನೇತೃತ್ವದಲ್ಲಿ ತಳವಾರ ಸಮಾಜ ಬಾಂಧವರು ವಿಜಯಪೂರ ಸಂಸದ ರಮೇಶ ಜಿಗಜಿಣಗಿ ಅವರಿಗೆ ಮನವಿ ಸಲ್ಲಿಸಿದರು. ತಳವಾರ ಸಮಾಜದ ಜಿಲ್ಲಾಧ್ಯಕ್ಷ ಅನೀಲ ಜಮಾದಾರ, ರವಿಕಾಂತ ವಗ್ಗೆ ಮಾತನಾಡಿ, ಜಿಲ್ಲೆಯಲ್ಲಿ ಪರಿಶಿಷ್ಠ ಪಂಗಡದಲ್ಲಿ ಬರುವ ತಳವಾರ, ವಾಲ್ಮೀಕಿ, ಬೇಡ, ಬೇಡರ ಹಾಗೂ ಹರಣಶಿಕಾರಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ. ಆದರೆ ಈ ಎಲ್ಲ ಸಮುದಾಯಗಳು ಶಿಕ್ಷಣವಂಚಿರಾಗಿದ್ದರಿಂದ ಯಾವುದೇ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಸಾಧ್ಯವಾಗಿಲ್ಲ. ಈ ಸಮುದಾಯಗಳು ಮುಖ್ಯವಾಹಿನಿಗೆ ಬರಬೇಕಾದರೆ ಶೈಕ್ಷಣಿಕ ರಂಗ ಅವಶ್ಯವಾಗಿದ್ದು ಕೇಂದ್ರೀಯ ಏಕಲವ್ಯ ಮಾದರಿ ವಸತಿ ಶಾಲೆ ಮಂಜೂರು ಮಾಡಿ ಈ ಸಮುದಾಯಗಳ ಮಕ್ಕಳ ಭವಿಷ್ಯಕ್ಕೆ ದಾರಿ ಮಾಡಿಕೊಡಬೇಕೆಂದು ಮನವಿ ಮಾಡಿಕೊಂಡರು. ರವಿ ರಾಯಜಿ, ರಮೇಶ ಗುಡ್ಡೇವಾಡಿ, ಸಂತೋಶ ಕೋಳಿ, ಮಂಜು ಜಮಾದಾರ, ವಿವೇಕಾನಂದ ಡಬ್ಬಿ, ರಮೇಶ ಕೋಳಿ, ಗುರು ತಳವಾರ, ಅಣ್ಣಪ್ಪ ತಳವಾರ, ಶಾಂತು ವಾಲೀಕಾರ, ಸಂತೋಷ ವಾಲೀಕಾರ, ಸುರೇಶ ಕೋಲ್ಕರ ಸೇರಿದಂತೆ ಇನ್ನಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 