ವೈದ್ಯಕೀಯ ಸ್ನಾತಕೋತ್ತರ, ಸಂಶೋಧನಾ ವಿದ್ಯಾರ್ಥಿಗಳಿಗಾಗಿ ಇಂಟರ್ನ್ಶಿಪ್ಗೆ ಅರ್ಜಿ ಆಹ್ವಾನ
ಬೆಂಗಳೂರು, ಏಪ್ರಿಲ್ 28,ರಾಜ್ಯದಲ್ಲಿ ಉಂಟಾಗಿರುವ ಕೊರೋನಾ ವೈರಸ್ ಆರೋಗ್ಯ ತುರ್ತು ಸಂದರ್ಭದಲ್ಲಿ ವೈದ್ಯಕೀಯ ಸ್ನಾತಕೋತ್ತರ ಹಾಗೂ ಸಂಶೋಧನಾ ವಿದ್ಯಾರ್ಥಿಗಳಿಂದ ಇಂಟರ್ನ್ಶಿಪ್ ತರಬೇತಿಗೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸಿದೆ.ಕೊವಿಡ್ - 19 ನಿಂದ ಉಂಟಾಗಿರುವ ಸಮಸ್ಯೆ ಸವಾಲುಗಳನ್ನು ಎದರಿಸಲು ಸಾರ್ವಜನಿಕರಿಗೆ ಹಾಗೂ ಸರ್ಕಾರಕ್ಕೆ ಸಹಾಯವಾಗುವಂತೆ ದತ್ತಾಂಶಗಳ ವಿಶ್ಲೇಷಣೆ ಹಾಗೂ ಸಾಕ್ಷಾಧಾರ ನೀತಿ ನಿರೂಪಣೆಗಾಗಿ ಅವಶ್ಯವಿರುವ ಅಂಶಗಳನ್ನು ಪಡೆಯಲು ಇಂಟರ್ನ್ಶಿಪ್ ರೂಪದಲ್ಲಿ ವೈದ್ಯಕೀಯ ಶಿಕ್ಷಣದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಂದ 3 ತಿಂಗಳ ಇಂಟರ್ನ್ಶಿಪ್ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ.
ಇಂಟರ್ನ್ಶಿಪ್ ಮಾಡುವ ಅಭ್ಯರ್ಥಿಗಳಿಗೆ ಯಾವುದೇ ಸಂಭಾವನೆ ಇರುವುದಿಲ್ಲ ಆದರೆ ಅಭ್ಯರ್ಥಿಗಳಿಗೆ ಉನ್ನತ ಮಟ್ಟದ ಸರ್ಕಾರಿ ಅಧಿಕಾರಿಗಳು, ಸಂಶೋಧಕರು ಹಾಗೂ ವಿದ್ವಾಂಸರ ಜೊತೆ ಕೆಲಸ ನಿರ್ವಹಿಸುವ ಅವಕಾಶ ದೊರೆಯಲಿದೆ. ಅಭ್ಯರ್ಥಿಗಳು ಅನ್ಲೈನ್ ಮೂಲಕ 3 ತಿಂಗಳ ವರೆಗೆ ಕೆಲಸ ಮಾಹಬಹುದಾಗಿದ್ದು, ಅಂತಹವರಿಗೆ ಸರ್ಕಾರದಿಂದ ಪ್ರಶಸ್ತಿ ಪತ್ರ ನೀಡಲಾಗುವುದು ಎಂದು ಯೋಜನೆ, ಕಾರ್ಯಕ್ರಮ ಸಂಯೋಜನೆ ಮತ್ತು ಸಾಂಖಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ತಿಳಿಸಿದ್ದಾರೆ. ಅಭ್ಯರ್ಥಿಗಳು ಒಂದು ವಾರದೊಳಗೆ http:evasindhu.karnataka.gov.in ವೆಬ್ಸೈಟ್ನಲ್ಲಿ ಹೆಚ್ಚಿನ ಮಾಹಿತಿ ಪಡೆದುಕೊಂಡು ಅರ್ಜಿ ಸಲ್ಲಿಸಬಹುದಾಗಿದೆ.
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 