ಅಪ್ಪುಗೋಳ ವಂಚನೆ : ಶೀಘ್ರ ಬೆಳಗಾವಿಗೆ ಸಿಐಡಿ ತಂಡ
ಬೆಳಗಾವಿ : ನಗರದ ಆನಂದ ಅಪ್ಪುಗೋಳ ಆಧಿನದ ಸಂಗೊಳಿ ರಾಯಣ್ಣ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಗಳ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದು, ಈ ಕುರಿತು ಅಧಿಕಾರಿಗಳ ತಂಡವು ಶೀಘ್ರವಾಗಿ ಬೆಳಗಾವಿಗೆ ಆಗಮಿಸಲಿದೆ ಎಂದು ಹೇಳಲಾಗಿದೆ.
ಸಿಐಡಿ ಡಿವೈಎಸ್ಪಿ ಪುರಷೋತ್ತಮ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಭೀಮಾಂಬಿಕ ಸಹಕಾರ ಸಂಘಗಳ 50ಕ್ಕೂ ಅಧಿಕ ಸೊಸೈಟಿಗಳಲ್ಲಿ ಸಾವಿರಾರು ಜನ ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಹಣ ಇಟ್ಟಿದ್ದರು. ಠೇವಣಿ ಅವಧಿ ಮುಗಿದರೂ ಸೊಸೈಟಿ ಅಧ್ಯಕ್ಷ ಹಾಗೂ ಚಿತ್ರ ನಿಮರ್ಾಪಕ ಆನಂದ ಅಪ್ಪುಗೋಳ ಹಣ ಮರಳಿಸದೇ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.
ಈ ಕುರಿತು ಗ್ರಾಹಕರು ಪ್ರತಿಭಟನೆ ನಡೆಸುತ್ತಲೇ ಇದ್ದು, ಕೆಲ ತಿಂಗಳ ಹಿಂದೆಯಷ್ಟೇ ಮಹಾನಗರ ಪೊಲೀಸರು ಈ ನೂರಾರು ಕೋಟಿ ವಂಚನೆಯ ತನಿಖೆಯನ್ನು ಸಿಒಡಿಗೆ ಹಸ್ತಾಂತರಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ಡಿವೈಎಸ್ಪಿ ಪುರಷೋತ್ತಮ ನೇತೃತ್ವದ ತಂಡ ಮುಂದಿನ ವಾರ ಬೆಳಗಾವಿಗೆ ಬರಲಿದೆ. ಸೊಸೈಟಿ ಅಧ್ಯಕ್ಷ ಆನಂದ ಅಪ್ಪುಗೋಳ ಹಾಗೂ ಸೊಸೈಟಿ ನಿದರ್ೆಶಕರನ್ನು ಈ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.
ರಾಜ್ಯ ಸಕರ್ಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದು, ತಮ್ಮ ಠೇವಣಿ ಹಣ ಕೈ ಸೇರುವ ನಿರೀಕ್ಷೆಯಲ್ಲಿ ಗ್ರಾಹಕರಿದ್ದಾರೆ ಎಂದು ಹೇಳಲಾಗಿದೆ.
ಚುಚ್ಚುಮದ್ದು ನೀಡಿ ಪತಿ ಹತ್ಯೆ ಮಾಡಿದ್ದ ಪತ್ನಿ, ಪ್ರೀಯಕರ: ಸಮಾಧಿಯಿಂದ ಮಾಜಿ ಸೈನಿಕನ ಶವ ಹೊರಕ್ಕೆ, ತನಿಖೆ ಚುರುಕು
ತಿಲಾರಿ ಘಾಟ್ ಅರಣ್ಯದಲ್ಲಿ ಬೆಳಗಾವಿ ಮಹಿಳೆಯ ಹತ್ಯೆ: ಮಹಾ ಪೊಲೀಸರಿಂದ 3 ಬಂಧನ, ಅನಾಥ ಶವ ಪ್ರಕರಣಕ್ಕೆ ರೋಚಕ ತಿರುವು
ಕುಟುಂಬ ಸಮೇತ ಯಲ್ಲಮ್ಮನ ದರ್ಶನ ಪಡೆದ ಜಿಲ್ಲಾಧಿಕಾರಿ ಮೊಹ್ಮದ್ ರೋಶನ್
ಪೊಲೀಸರ ವಾಹನ ಮೇಲೆ ಮುಗುಚಿಬಿದ್ದ ಲಾರಿ: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರು ಓರ್ವನಿಗೆ ಗಾಯ
ಕನ್ನಡಪರ ನಿರ್ಣಯಕ್ಕೆ ಮುಂದಾದ ಶಾಸಕ ಸೇಠ್ ಗೆ ಎಚ್ಚರಿಕೆ, ಗೊಡ್ಡು ಬೆದರಿಕೆ ಹಾಕಿದ ಝಫಾ ಮುಖಂಡ
ಸಿಸಿಬಿ ಪೊಲೀಸರ ದಾಳಿ: 10.31 ಲಕ್ಷ ಮೌಲ್ಯದ ಹೆರಾಯಿನ್, ವಸ್ತುಗಳ ವಶ ; ಮೂವರ ಬಂಧನ 