ಅಪ್ಪುಗೋಳ ವಂಚನೆ : ಶೀಘ್ರ ಬೆಳಗಾವಿಗೆ ಸಿಐಡಿ ತಂಡ
ಬೆಳಗಾವಿ : ನಗರದ ಆನಂದ ಅಪ್ಪುಗೋಳ ಆಧಿನದ ಸಂಗೊಳಿ ರಾಯಣ್ಣ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಗಳ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದು, ಈ ಕುರಿತು ಅಧಿಕಾರಿಗಳ ತಂಡವು ಶೀಘ್ರವಾಗಿ ಬೆಳಗಾವಿಗೆ ಆಗಮಿಸಲಿದೆ ಎಂದು ಹೇಳಲಾಗಿದೆ.
ಸಿಐಡಿ ಡಿವೈಎಸ್ಪಿ ಪುರಷೋತ್ತಮ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಭೀಮಾಂಬಿಕ ಸಹಕಾರ ಸಂಘಗಳ 50ಕ್ಕೂ ಅಧಿಕ ಸೊಸೈಟಿಗಳಲ್ಲಿ ಸಾವಿರಾರು ಜನ ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಹಣ ಇಟ್ಟಿದ್ದರು. ಠೇವಣಿ ಅವಧಿ ಮುಗಿದರೂ ಸೊಸೈಟಿ ಅಧ್ಯಕ್ಷ ಹಾಗೂ ಚಿತ್ರ ನಿಮರ್ಾಪಕ ಆನಂದ ಅಪ್ಪುಗೋಳ ಹಣ ಮರಳಿಸದೇ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.
ಈ ಕುರಿತು ಗ್ರಾಹಕರು ಪ್ರತಿಭಟನೆ ನಡೆಸುತ್ತಲೇ ಇದ್ದು, ಕೆಲ ತಿಂಗಳ ಹಿಂದೆಯಷ್ಟೇ ಮಹಾನಗರ ಪೊಲೀಸರು ಈ ನೂರಾರು ಕೋಟಿ ವಂಚನೆಯ ತನಿಖೆಯನ್ನು ಸಿಒಡಿಗೆ ಹಸ್ತಾಂತರಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ಡಿವೈಎಸ್ಪಿ ಪುರಷೋತ್ತಮ ನೇತೃತ್ವದ ತಂಡ ಮುಂದಿನ ವಾರ ಬೆಳಗಾವಿಗೆ ಬರಲಿದೆ. ಸೊಸೈಟಿ ಅಧ್ಯಕ್ಷ ಆನಂದ ಅಪ್ಪುಗೋಳ ಹಾಗೂ ಸೊಸೈಟಿ ನಿದರ್ೆಶಕರನ್ನು ಈ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.
ರಾಜ್ಯ ಸಕರ್ಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದು, ತಮ್ಮ ಠೇವಣಿ ಹಣ ಕೈ ಸೇರುವ ನಿರೀಕ್ಷೆಯಲ್ಲಿ ಗ್ರಾಹಕರಿದ್ದಾರೆ ಎಂದು ಹೇಳಲಾಗಿದೆ.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 