ಅಪ್ಪುಗೋಳ ವಂಚನೆ : ಶೀಘ್ರ ಬೆಳಗಾವಿಗೆ ಸಿಐಡಿ ತಂಡ
ಬೆಳಗಾವಿ : ನಗರದ ಆನಂದ ಅಪ್ಪುಗೋಳ ಆಧಿನದ ಸಂಗೊಳಿ ರಾಯಣ್ಣ ಸೊಸೈಟಿಯಲ್ಲಿ ನಡೆದಿದೆ ಎನ್ನಲಾದ ನೂರಾರು ಕೋಟಿ ರೂಗಳ ವಂಚನೆ ಪ್ರಕರಣದ ತನಿಖೆಯನ್ನು ಸಿಐಡಿ ಅಧಿಕಾರಿಗಳು ಆರಂಭಿಸಿದ್ದು, ಈ ಕುರಿತು ಅಧಿಕಾರಿಗಳ ತಂಡವು ಶೀಘ್ರವಾಗಿ ಬೆಳಗಾವಿಗೆ ಆಗಮಿಸಲಿದೆ ಎಂದು ಹೇಳಲಾಗಿದೆ.
ಸಿಐಡಿ ಡಿವೈಎಸ್ಪಿ ಪುರಷೋತ್ತಮ ಈ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಬೆಳಗಾವಿಯ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹಾಗೂ ಭೀಮಾಂಬಿಕ ಸಹಕಾರ ಸಂಘಗಳ 50ಕ್ಕೂ ಅಧಿಕ ಸೊಸೈಟಿಗಳಲ್ಲಿ ಸಾವಿರಾರು ಜನ ಗ್ರಾಹಕರು ನೂರಾರು ಕೋಟಿ ರೂ. ಠೇವಣಿ ಹಣ ಇಟ್ಟಿದ್ದರು. ಠೇವಣಿ ಅವಧಿ ಮುಗಿದರೂ ಸೊಸೈಟಿ ಅಧ್ಯಕ್ಷ ಹಾಗೂ ಚಿತ್ರ ನಿಮರ್ಾಪಕ ಆನಂದ ಅಪ್ಪುಗೋಳ ಹಣ ಮರಳಿಸದೇ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.
ಈ ಕುರಿತು ಗ್ರಾಹಕರು ಪ್ರತಿಭಟನೆ ನಡೆಸುತ್ತಲೇ ಇದ್ದು, ಕೆಲ ತಿಂಗಳ ಹಿಂದೆಯಷ್ಟೇ ಮಹಾನಗರ ಪೊಲೀಸರು ಈ ನೂರಾರು ಕೋಟಿ ವಂಚನೆಯ ತನಿಖೆಯನ್ನು ಸಿಒಡಿಗೆ ಹಸ್ತಾಂತರಿಸಿದ್ದರು. ಪ್ರಕರಣದ ತನಿಖೆ ಆರಂಭಿಸಿರುವ ಡಿವೈಎಸ್ಪಿ ಪುರಷೋತ್ತಮ ನೇತೃತ್ವದ ತಂಡ ಮುಂದಿನ ವಾರ ಬೆಳಗಾವಿಗೆ ಬರಲಿದೆ. ಸೊಸೈಟಿ ಅಧ್ಯಕ್ಷ ಆನಂದ ಅಪ್ಪುಗೋಳ ಹಾಗೂ ಸೊಸೈಟಿ ನಿದರ್ೆಶಕರನ್ನು ಈ ತಂಡ ವಶಕ್ಕೆ ಪಡೆದು ವಿಚಾರಣೆ ನಡೆಸಲಿದೆ.
ರಾಜ್ಯ ಸಕರ್ಾರ ಈ ಪ್ರಕರಣವನ್ನು ಸಿಐಡಿಗೆ ಹಸ್ತಾಂತರಿಸಿದ್ದು, ತಮ್ಮ ಠೇವಣಿ ಹಣ ಕೈ ಸೇರುವ ನಿರೀಕ್ಷೆಯಲ್ಲಿ ಗ್ರಾಹಕರಿದ್ದಾರೆ ಎಂದು ಹೇಳಲಾಗಿದೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 