ಹಾವೇರಿ: ಹಾವೇರಿ ಜಿಲ್ಲಾ ಪಂಚಾಯತ್ ಕಾರ್ಯಕ್ರಮಗಳ 2019-20ನೇ ಸಾಲಿನ 30979.67 ಲಕ್ಷ ರೂ.ಗಳ ವಾಷರ್ಿಕ ಕ್ರಿಯಾ ಯೋಜನೆಗೆ ಜಿಲ್ಲಾ ಪಂಚಾಯತ್ ಸಾಮಾನ್ಯ ಸಭೆ ಸವರ್ಾನುಮತದಿಂದ ಅನುಮೋದನೆ ನೀಡಿದೆ.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಅಧ್ಯಕ್ಷತೆಯಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ 31 ಇಲಾಖೆಗಳಿಗೆ ಅನುದಾನ ಹಂಚಿಕೆಮಾಡಿ ಲಿಂಕ್ ಡಾಕ್ಯೂಮೆಂಟ್ ಅಡಿ 2019-20ನೇ ಸಾಲಿನಲ್ಲಿ ತಯಾರಿಸಲಾದ ಕ್ರಿಯಾಯೋಜನೆಗೆ ಅನುಮೋದನೆ ನೀಡಲಾಯಿತು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಶಾಸನಬದ್ಧ ಅಭಿವೃದ್ಧಿ ಅನುದಾನದ 2019-20ನೇ ಸಾಲಿನ 565 ಲಕ್ಷ ರೂ.ಗೆ ಪಂಚಾಯತ್ ರಾಜ್ ಇಂಜನೀಯರ್ ವಿಭಾಗದಿಂದ ತಯಾರಿಸಲಾದ ವಾಷರ್ಿಕ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಶಾಸನಬದ್ಧ ಅನುದಾನದಲ್ಲಿ ಜಿಲ್ಲಾ ಪಂಚಾಯತಿ ಕಚೇರಿ ಕಟ್ಟಡದ ಮಳೆ ನೀರು ಕೊಯ್ಲು, ಶೆಡ್ ನಿಮರ್ಾಣ, ಕೊಠಡಿಗೆ ಪಿಓಪಿ, ಪ್ಯಾನ್, ವಾಲ್ ಪ್ಯಾನ್ಲಿಂಗ್, ವಾಡರ್್ರೋಬ್ ಹಾಗೂ ನೆಲ ಹಾಸಿಗೆ ಪ್ಲೋರೊಂಗ್ ಮ್ಯಾಟ್ ಅಳವಡಿಕೆ, ಆರ್.ಸಿ.ಸಿ. ನೀರಿನ ಟ್ಯಾಂಕ್ ನಿಮರ್ಾಣ, ಹಳೆ ಕಚೇರಿ ನಿರ್ವಹಣೆಗಾಗಿ 75 ಲಕ್ಷ ರೂ.ಗಳನ್ನು ಕಾಯ್ದಿರಿಸಲಾಗಿದೆ. ಈ ಕುರಿತಂತೆ ಸದಸ್ಯರು ಆಕ್ಷೇಪಣೆ ವ್ಯಕ್ತಪಡಿಸಿ ಯಾವುದೇ ಸದಸ್ಯರ ಗಮನಕ್ಕೆ ತರದೆ ಅನುದಾನ ಒದಗಿಸಲಾಗಿದೆ ಎಂದು ಆರೋಪಿಸಿ ಆಕ್ಷೇಪಣೆ ವ್ಯಕ್ತವಾದ ಹಿನ್ನೆಲೆಯಲ್ಲಿ ಈ ಕಾಮಗಾರಿಗಳನ್ನು ಬದಲಿಸಿ ಜಿಲ್ಲಾ ಪಂಚಾಯತ್ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗೆ ಅತಿಥಿ ಗೃಹದ ವಿನ್ಯಾಸಕ್ಕೆ ಬಳಸಲು ತಿದ್ದುಪಡಿಯೊಂದಿಗೆ ಶಾಸನಬದ್ಧ ಅನುದಾನದ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಯಿತು.
ಯಾವ ಇಲಾಖೆಗೆ ಎಷ್ಟು ಹಣ: ಶಿಕ್ಷಣ ಇಲಾಖೆ ರೂ. 15902.47 ಲಕ್ಷ, ಲೋಕ ಶಿಕ್ಷಣ ಇಲಾಖೆಗೆ ರೂ.32.67 ಲಕ್ಷ, ಕ್ರೀಡೆ ಮತ್ತು ಯುವಜನ ಸೇವಾ ಇಲಾಖೆಗೆ ರೂ.202.94 ಲಕ್ಷ, ವೈದ್ಯಕೀಯ ಮತ್ತು ಜನಾರೋಗ್ಯಕ್ಕೆ ರೂ.3390.38 ಲಕ್ಷ, ಆಯುಷ್ ಇಲಾಖೆಗೆ ರೂ.246.29 ಲಕ್ಷ, ಕುಟುಂಬ ಕಲ್ಯಾಣ ಇಲಾಖೆಗೆ ರೂ1417.56 ಲಕ್ಷ, ಪರಿಶಿಷ್ಟ ಜಾತಿಯವರ ಕಲ್ಯಾಣಕ್ಕೆ ರೂ.1839.50 ಲಕ್ಷ, ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ರೂ.706.91 ಲಕ್ಷ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ರೂ.2715.83 ಲಕ್ಷ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ರೂ.135.06 ಲಕ್ಷ, ಕೃಷಿ ಇಲಾಖೆಗೆ ರೂ.471.29 ಲಕ್ಷ, ತೋಟಗಾರಿಕೆ ಇಲಾಖೆಗೆ ರೂ.495.35 ಲಕ್ಷ, ಪಶು ಸಂಗೋಪನೆ ಇಲಾಖೆಗೆ ರೂ.342.27 ಲಕ್ಷ, ಮೀನುಗಾರಿಕೆ ಇಲಾಖೆಗೆ ರೂ. 87.17 ಲಕ್ಷ, ಅರಣ್ಯ ಇಲಾಖೆಗೆ ರೂ.511.26 ಲಕ್ಷ, ಸಹಕಾರ ಇಲಾಖೆಗೆ ರೂ.20.10 ಲಕ್ಷ, ಪ್ರದೇಶಾಭಿವೃದ್ಧಿ ಮತ್ತು ಇತರೆ ಗ್ರಾಮೀಣಾಭಿವೃದ್ಧಿ ಕಾರ್ಯಕ್ರಮಕ್ಕೆ ರೂ.395.38 ಲಕ್ಷ, ಸಣ್ಣ ನೀರಾವರಿ ಇಲಾಖೆಗೆ ರೂ.62.48 ಲಕ್ಷ, ಗ್ರಾಮೋದ್ಯಮ ಮತ್ತು ಸಣ್ಣ ಉದ್ಯಮಕ್ಕೆ ರೂ.67.27 ಲಕ್ಷ, ರೇಷ್ಮೆ ಇಲಾಖೆಗೆ ರೂ.185.16 ಲಕ್ಷ ರೂ., ರಸ್ತೆ ಮತ್ತು ಸೇತುವೆಗೆ ರೂ.620 ಲಕ್ಷ, ಸಚಿವಾಲಯ ಆಥರ್ಿಕ ಸೇವೆಗಳಿಗೆ ರೂ.73.27 ಲಕ್ಷ, ಕೈಮಗ್ಗ ಮತ್ತು ಜವಳಿ ಇಲಾಖೆಗೆ ರೂ.38.25 ಲಕ್ಷ, ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ರೂ. 7 ಲಕ್ಷ, ಕಲೆ ಮತ್ತು ಸಂಸ್ಕೃತಿಗೆ ರೂ.10 ಲಕ್ಷ, ಉದ್ಯೋಗ ಮತ್ತು ತರಬೇತಿಗೆ ರೂ.103.05 ಲಕ್ಷ, ಅಂಗವಿಕಲರ ಮತ್ತು ಹಿರಿಯರ ಕಲ್ಯಾಣ ನಾಗರಿಕರ ಕಲ್ಯಾಣಕ್ಕೆ ರೂ.118.02, ಕೃಷಿ ಮಾರುಕಟ್ಟೆಗೆ ರೂ.20 ಲಕ್ಷ, ಅಲ್ಪ ಸಂಖ್ಯಾತರ ಕಲ್ಯಾಣಕ್ಕೆ ರೂ.323.40 ಲಕ್ಷ, ಲೋಕೋಪಯೋಗಿ ಕಾರ್ಯಕ್ರಮಗಳಿಗೆ ರೂ.439.34 ಲಕ್ಷ ಒಳಗೊಂಡಂತೆ ರೂ.30979.67 ಲಕ್ಷ ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ.
ತಕರಾರು: ಗ್ರಾಮೀಣ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ ಗ್ರಾಮೀಣ ಕುಡಿಯುವ ನೀರು ಯೋಜನೆಗಾಗಿ ತಯಾರಿಸಲಾದ 43.89 ಕೋಟಿ ರೂ. ಕ್ರಿಯಾ ಯೋಜನೆಗೆ ಕಳೆದ ಸಾಮಾನ್ಯ ಸಭೆಯಲ್ಲಿ ಅನುಮೋದನೆ ನೀಡಲು ನಿರಾಕರಿಸಿದಂತೆ ಈ ಸಭೆಯಲ್ಲೂ ಅನುಮೋದನೆ ನೀಡಲಿಲ್ಲ. ಸದಸ್ಯರ ಅಭಿಪ್ರಾಯಗಳನ್ನು ಕಡೆಗಣಿಸಿ ಅಧಿಕಾರಿಗಳೇ ಕ್ರಿಯಾಯೋಜನೆ ತಯಾರಿಸಿ ಅನುಮೋದನೆ ಪಡೆದಿದ್ದಾರೆ. ಈ ಕ್ರಿಯಾ ಯೋಜನೆಯನ್ನು ರದ್ದುಪಡಿಸಬೇಕು. ಕ್ರಿಯಾ ಯೋಜನೆ ತಯಾರಿಸಿದ ಅಧಿಕಾರಿಗಳನ್ನು ಅಮಾನತ್ತುಗೊಳಿಸಬೇಕು ಎಂದು ಸದಸ್ಯರು ಆಗ್ರಹಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷ ಎಸ್.ಕೆ.ಕರಿಯಣ್ಣನವರ ಮಾತನಾಡಿ, ಜಿಲ್ಲಾ ಪಂಚಾಯತ್ ಸದಸ್ಯರ ಅನುಮೊದನೆ ಪಡೆಯದೇ ಶಾಸಕರ ಗಮನಕ್ಕೆ ತರದೆ ಕ್ರಿಯಾ ಯೋಜನೆಯನ್ನು ಅಧಿಕಾರಿಗಳ ಹಂತದಲ್ಲಿ ಅನುಮೋದನೆ ಪಡೆಯಲಾಗಿದೆ.
ಬೆಳಗಾವಿಯಲ್ಲಿ ಸೆಪ್ಟೆಂಬರ್ 9 ತಾರೀಖು ಗ್ರಾಮೀಣಾಭಿವೃದ್ಧಿ ಸಚಿವರು ಬೆಳಗಾವಿಯಲ್ಲಿ ಸಭೆ ಕರೆದಿದ್ದಾರೆ. ಈ ಕುರಿತಂತೆ ಸಚಿವರ ಗಮನಕ್ಕೆ ತರಲಾಗುವುದು. ಸದಸ್ಯರ ಶಿಫಾರಸ್ಸಗಳನ್ನು ಪರಿಗಣಿಸುವಂತೆ ಮನವಿ ಮಾಡುವುದಾಗಿ ಸಭೆಗೆ ತಿಳಿಸಿದರು.
ಐದು ಲಕ್ಷದವರೆಗಿನ ಕುಡಿಯುವ ನೀರಿನ ಕಾಮಗಾರಿಗಳನ್ನು ಟೆಂಡರ್ ಇಲ್ಲದೆ ಅನುಷ್ಠಾನಗೊಳಿಸಬೇಕಾಗಿದೆ. ವಿಳಂಬವಾದರೆ ಎಲ್ಲ ಕಾಮಗಾರಿಗಳನ್ನು ಟೆಂಡರ್ ಮಾಡಬೇಕಾಗುತ್ತದೆ. ಲೋಪವನ್ನು ಸರಿಪಡಿಸಲಾಗುವುದು, ಅನುಮೋದನೆ ನೀಡಿ ಎಂದು ಮನವಿ ಮಾಡಿಕೊಂಡರು. ಆದರೂ ಈ ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಿಲ್ಲ.
ಸಭೆಯಲ್ಲಿ ಉಪಾಧ್ಯಕ್ಷರಾದ ಗಿರಿಜವ್ವ ಬ್ಯಾಲದಹಳ್ಳಿ, ಶಾಸಕರಾದ ನೆಹರು ಓಲೇಕಾರ, ಪ್ರಭಾರ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿವರ್ಾಹಣಾಧಿಕಾರಿಗಳಾದ ಜಿಲ್ಲಾದಿಕಾರಿ ಕೃಷ್ಣ ಬಾಜಪೇಯಿ, ಜಿ.ಪಂ.ಉಪಕಾರ್ಯದಶರ್ಿ ಜಿ.ಗೋವಿಂದಸ್ವಾಮಿ ಉಪಸ್ಥಿತರಿದ್ದರು.