ಪಾಕ್ ಪಡೆಯಿಂದ ಕದನವಿರಾಮ ಉಲ್ಲಂಘನೆ, ಅಪ್ರೊಚೋದಿತ ಗುಂಡಿನ ದಾಳಿ
ಶ್ರೀನಗರ, ಡಿಸೆಂಬರ್ 18 ಪಾಕಿಸ್ತಾನದ
ಸೇನೆ ಕದನ ವಿರಾಮ ಉಲ್ಲಂಘಿಸಿ ಕುಪ್ವಾರಾದ ಗಡಿ ಪ್ರದೇಶದಲ್ಲಿ
ಅಪ್ರಚೋದಿತ ಗುಂಡು ಮತ್ತು ಶೆಲ್ ದಾಳಿ ನಡೆಸಿದೆ ಎಂದು
ಅಧಿಕೃತ ಮೂಲಗಳು ಬುಧವಾರ ತಿಳಿಸಿವೆ.ಸೇನಾ ನೆಲೆಗಳು
ಮತ್ತು ನಾಗರಿಕ ಪ್ರದೇಶಗಳನ್ನು ಪ್ರಮುಖ ಗುರಿಯಾಗಿಟ್ಟುಕೊಂಡು
ಪಾಕ್ ಪಡೆಗಳು ಕರ್ನಾ ಸೆಕ್ಟರ್ನಲ್ಲಿ ಕಳೆದ 24 ಗಂಟೆಗಳ
ಅವಧಿಯಲ್ಲಿ ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ದಾಳಿ ಮಾಡಿವೆ. ಒಂದು ವಾರದಿಂದ ಹಿಮದ ಕಾರಣ ಜಿಲ್ಲಾ ಪ್ರಧಾನ ಕಚೇರಿ ಕುಪ್ವಾರಾದಿಂದ ಬೇರ್ಪಟ್ಟಿದೆ. ಇದಕ್ಕೆ ಪ್ರತಿಯಾಗಿ ಭಾರತಿಯ ಪಡೆಗಳು ಸೂಕ್ತ ಪ್ರತ್ಯುತ್ತರ
ನೀಡಿವೆ ನಿಂಯತ್ರಣ ರೇಖೆಯಾದ್ಯಂತ ಪಾಕ್ ನೆಲೆಯನ್ನು
ಗುರಿಯಾಗಿಸಿಕೊಂಡು ಪ್ರತೀಕಾರ ತೀರಿಸಿಕೊಂಡಿವೆ ಎಂದು
ಅವರು ಹೇಳಿದರು.ಪಾಕ್ ಶೆಲ್ ದಾಳಿಯಲ್ಲಿ ಮೂರು ಮನೆಗಳಿಗೆ ಹಾನಿಯಾಗಿದೆ ಎಂದು ಅವರು ಹೇಳಿದರು. ಆದರೆ,
ಯಾರಿಗೂ ಗಾಯಗಳಾಗಿಲ್ಲ. ಪಾಕಿಸ್ತಾನ-ಆಕ್ರಮಿತ-ಕಾಶ್ಮೀರ (ಪಿಒಕೆ) ಯಿಂದ ದೇಶದ ಒಳಕ್ಕೆ ನುಸುಳಲು ಉಗ್ರರಿಗೆ ರಕ್ಷಣೆ ನೀಡಲು ಪಾಕ್ ಪಡೆ ಗುಂಡಿನ
ದಾಳಿ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ, ಅಲ್ಲಿ ಹೆಚ್ಚಿನ ಸಂಖ್ಯೆಯ ತರಬೇತಿ ಪಡೆದ ಉಗ್ರರು
ಒಳನುಸುಳಲು ಅವಕಾಶಕ್ಕಾಗಿ ಕಾಯುತ್ತಿದ್ದಾರೆ ಎನ್ನಲಾಗಿದೆ.
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಕ್ರಿಕೇಟಿಗ್ ಧೋನಿ ಬೆಳಗಾವಿಗೆ ಕರೆಸಿ : ವಿದ್ಯಾರ್ಥಿಗಳಿಂದ ಡಿಸಿಗೆ ವಿಭಿನ್ನ ಮನವಿ
ಮಳೆಯಿಂದ ಕಾರಲಗಾ ಗ್ರಾಮ ಜಲಾವೃತ; ವಿದ್ಯಾರ್ಥಿಗಳ ಪರದಾಟ : ಶಾಲಾ ಕಾಲೇಜುಗಳಿಗೆ ರಜೆ
ಆಲಂದಿಯಲ್ಲಿ ಪ್ರವಾಹ: ಭಾರೀ ಮಳೆಯಿಂದ ಇಂದ್ರಾಯಣಿ ನದಿ ಉಕ್ಕಿ ಹರಿದು ಸೇತುವೆಗಳು ಮುಚ್ಚಲ್ಪಟ್ಟವು; ನದಿತೀರ ಪ್ರದೇಶಗಳು ಜಲಾವೃತ
ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ, ಜೀವ ಬೆದರಿಕೆ, ನ್ಯಾಯಕ್ಕಾಗಿ ಡಿಸಿ, ಎಸ್ಪಿಗೆ ಉಪನ್ಯಾಸಕನ ಮೊರೆ
ಗೌರಿ ಸ್ಪ್ರಾಟ್ ಅವರನ್ನು ವಿವಾಹವಾದ ಅಮೀರ್ ಖಾನ್; ಮುಂಬೈಯಲ್ಲಿ ಆಪ್ತರ ಸಮ್ಮುಖದಲ್ಲಿ ಸರಳ ವಿವಾಹ ಸಮಾರಂಭ 