ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ ಸೇನಾ ಪುರಸ್ಕಾರ..?
ನವದೆಹಲಿ ಆಗಸ್ಟ್ 8 ಭಾರತೀಯ ವಾಯು ಪಡೆ ಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಕೇಂದ್ರ ಸರ್ಕಾರ ಉನ್ನತ ಸೇನಾ ಪುರಸ್ಕಾರ ಪ್ರಧಾನ ಮಾಡುವ ಸಾಧ್ಯತೆಗಳಿವೆ. ಪಾಕಿಸ್ತಾನದ ಬಾಲಕೋಟ್ ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ವಾಯುದಾಳಿ ನಡೆಸಿದ ದಾಳಿಯ ನಂತರ, ಪಾಕಿಸ್ತಾನ ನಡೆಸಿ ದಾಳಿಯ ವೇಳೆ, ಗಗನದಲ್ಲಿ ಪಾಕ್ ನ ಎಫ್16 ಯುದ್ಧ ವಿಮಾನ ಹೊಡೆದುರುಳಿಸಿದ್ದ ಭಾರತ ಮಾತೆಯ ಹೆಮ್ಮೆಯ ಪುತ್ರ ಅಭಿನಂದನ್, ಇದಕ್ಕಾಗಿಯೇ ಅವರಿಗೆ "ವೀರ ಚಕ್ರ" ಪುರಸ್ಕಾರ ನೀಡುವ ಸಾಧ್ಯತೆ ಇದೆ. ಪರಮವೀರ ಚಕ್ರ ಮತ್ತು ಮಹಾ ವೀರ ಚಕ್ರ ಪುರಸ್ಕಾರಗಳ ನಂತರದ ಅತ್ಯುನ್ನತ ಸೇನಾ ಪುರಸ್ಕಾರ ಇದಾಗಿದೆ. ಪಾಕಿಸ್ತಾನದ ಬಾಲಕೋಟ್ನಲ್ಲಿರುವ ಜೈಶ್ -ಎ - ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಶಿಬಿರಗಳ ಮೇಲೆ ಬಾಂಬ್ ಗಳನ್ನು ಸ್ಫೋಟಿಸಿದ ಐದು ಮಿರಾಜ್ 2000 ಯುದ್ಧ ವಿಮಾನಗಳ ಪೈಲಟ್ಗಳನ್ನು ಸಹ ಕೇಂದ್ರ ಸರ್ಕಾರ ಗೌರವಿಸಲಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ವಾಯುಪಡೆಯ ಈ ಪೈಲೆಟ್ ಗಳ ಸಾಹಸ ಗುರುತಿಸಿ ವಾಯುಪಡೆ ಪುರಸ್ಕಾರ ನೀಡಲಿದೆ. ತನ್ನ ಮಿಗ್ -21 ಬೈಸನ್ ವಿಮಾನ ಅಪಘಾತಕ್ಕೀಡಾದ ನಂತರ ಅಭಿನಂದನ್ ಪಾಕಿಸ್ತಾನದ ಭೂಪ್ರದೇಶಕ್ಕೆ ಬಿದ್ದಿದ್ದರು. ಎರಡು ದಿನಗಳ ಕಾಲ ಪಾಕಿಸ್ತಾನ ತನ್ನ ವಶದಲ್ಲಿರಿಸಿಕೊಂಡು ಕೊನೆಗೂ ಭಾರತ ಸರ್ಕಾರದ ರಾಜತಾಂತ್ರಿಕ ಒತ್ತಡಕ್ಕೆ ಮಣಿದು ಅವರನ್ನು ಭಾರತಕ್ಕೆ ಒಪ್ಪಿಸಿದ್ದರು. ಫೆಬ್ರವರಿ 26 ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬಾಲಕೋಟ್ನಲ್ಲಿ ವಾಯುದಾಳಿ ನಡೆಸಿತ್ತು
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 