ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಗೆ ಸೇನಾ ಪುರಸ್ಕಾರ..?
ನವದೆಹಲಿ ಆಗಸ್ಟ್ 8 ಭಾರತೀಯ ವಾಯು ಪಡೆ ಯ ಪೈಲಟ್ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರಿಗೆ ಕೇಂದ್ರ ಸರ್ಕಾರ ಉನ್ನತ ಸೇನಾ ಪುರಸ್ಕಾರ ಪ್ರಧಾನ ಮಾಡುವ ಸಾಧ್ಯತೆಗಳಿವೆ. ಪಾಕಿಸ್ತಾನದ ಬಾಲಕೋಟ್ ನಲ್ಲಿರುವ ಭಯೋತ್ಪಾದಕ ಶಿಬಿರಗಳ ಮೇಲೆ ಭಾರತೀಯ ವಾಯುದಾಳಿ ನಡೆಸಿದ ದಾಳಿಯ ನಂತರ, ಪಾಕಿಸ್ತಾನ ನಡೆಸಿ ದಾಳಿಯ ವೇಳೆ, ಗಗನದಲ್ಲಿ ಪಾಕ್ ನ ಎಫ್16 ಯುದ್ಧ ವಿಮಾನ ಹೊಡೆದುರುಳಿಸಿದ್ದ ಭಾರತ ಮಾತೆಯ ಹೆಮ್ಮೆಯ ಪುತ್ರ ಅಭಿನಂದನ್, ಇದಕ್ಕಾಗಿಯೇ ಅವರಿಗೆ "ವೀರ ಚಕ್ರ" ಪುರಸ್ಕಾರ ನೀಡುವ ಸಾಧ್ಯತೆ ಇದೆ. ಪರಮವೀರ ಚಕ್ರ ಮತ್ತು ಮಹಾ ವೀರ ಚಕ್ರ ಪುರಸ್ಕಾರಗಳ ನಂತರದ ಅತ್ಯುನ್ನತ ಸೇನಾ ಪುರಸ್ಕಾರ ಇದಾಗಿದೆ. ಪಾಕಿಸ್ತಾನದ ಬಾಲಕೋಟ್ನಲ್ಲಿರುವ ಜೈಶ್ -ಎ - ಮೊಹಮ್ಮದ್ (ಜೆಇಎಂ) ಭಯೋತ್ಪಾದಕ ಶಿಬಿರಗಳ ಮೇಲೆ ಬಾಂಬ್ ಗಳನ್ನು ಸ್ಫೋಟಿಸಿದ ಐದು ಮಿರಾಜ್ 2000 ಯುದ್ಧ ವಿಮಾನಗಳ ಪೈಲಟ್ಗಳನ್ನು ಸಹ ಕೇಂದ್ರ ಸರ್ಕಾರ ಗೌರವಿಸಲಿದೆ ಎಂಬ ಮಾಹಿತಿಗಳು ಲಭ್ಯವಾಗಿವೆ. ವಾಯುಪಡೆಯ ಈ ಪೈಲೆಟ್ ಗಳ ಸಾಹಸ ಗುರುತಿಸಿ ವಾಯುಪಡೆ ಪುರಸ್ಕಾರ ನೀಡಲಿದೆ. ತನ್ನ ಮಿಗ್ -21 ಬೈಸನ್ ವಿಮಾನ ಅಪಘಾತಕ್ಕೀಡಾದ ನಂತರ ಅಭಿನಂದನ್ ಪಾಕಿಸ್ತಾನದ ಭೂಪ್ರದೇಶಕ್ಕೆ ಬಿದ್ದಿದ್ದರು. ಎರಡು ದಿನಗಳ ಕಾಲ ಪಾಕಿಸ್ತಾನ ತನ್ನ ವಶದಲ್ಲಿರಿಸಿಕೊಂಡು ಕೊನೆಗೂ ಭಾರತ ಸರ್ಕಾರದ ರಾಜತಾಂತ್ರಿಕ ಒತ್ತಡಕ್ಕೆ ಮಣಿದು ಅವರನ್ನು ಭಾರತಕ್ಕೆ ಒಪ್ಪಿಸಿದ್ದರು. ಫೆಬ್ರವರಿ 26 ರಂದು ಪುಲ್ವಾಮಾದಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಬಾಲಕೋಟ್ನಲ್ಲಿ ವಾಯುದಾಳಿ ನಡೆಸಿತ್ತು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 