ಪಂಡರಾಪೂರ ಭಕ್ತಾದಿಗಳಿಗೆ ಮಹಾಪ್ರಸಾದ ವ್ಯವಸ್ಥೆ
Arrangements for Mahaprasad for Pandharapur devotees
ಲೋಕದರ್ಶನ ವರದಿ
ಯಮಕನಮರಡಿ 15 : ಸ್ಥಳೀಯ ಪಾಂಡುರಂಗ ಭಕ್ತರಾದ ಶ್ರೀ ಬಾಳಪ್ಪ ಬಸಪ್ಪ ಹೊನ್ನಂಗಿ ಅವರು ಬೆಳಗಾವಿ ತಾಲೂಕಿನ ಎಳ್ಳೂರು ಗ್ರಾಮದಿಂದ ಪಾದಯಾತ್ರೆ ಮೂಲಕ ಯಮಕನಮರಡಿಗೆ ಆಗಮಿಸಿದ ಸಂದರ್ಭದಲ್ಲಿ ಗ್ರಾಮಸ್ಥರು ಹಾಗೂ ಭಕ್ತಾದಿಗಳು ಭಕ್ತಿಪೂರ್ವಕವಾಗಿ ಸ್ವಾಗತಿಸಿದರು. ಪಾದಯಾತ್ರೆಯ ನಂತರ ಭಕ್ತಾದಿಗಳಿಗಾಗಿ ವಿಶೇಷ ಮಹಾಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ಕಾರ್ಯಕ್ರಮ ಭಕ್ತಿಮಯ ವಾತಾವರಣದಲ್ಲಿ ನಡೆಯಿತು. ಈ ಸೇವಾ ಕಾರ್ಯದಲ್ಲಿ ರಾಜು ತತವೀರ, ವಿಠ್ಠಲ್ ಮದಿಹಳ್ಳಿ, ಸಂತೋಷ್ ಬಾವನ್ನವರ್, ವಿಠ್ಠಲ್ ತುಬಶೆಟ್ಟಿ, ಅನಿಲ್ ಮಾರ್ಯಾಳಿ, ವಿಠ್ಠಲ್ ಹುಕ್ಕೇರಿ, ಮಂಜುನಾಥ್ ತುಬಶೆಟ್ಟಿ, ಅಭಿಜಿತ್ ಬಾವನ್ನವರ್, ಶ್ರೀನಿವಾಸ್ ಅರಳಿಕಟ್ಟಿ, ನಾಗಪ್ಪ ಬೆಳಗಾವಿ ಸೇರಿದಂತೆ ಅನೇಕ ಭಕ್ತರು ಸಹಕರಿಸಿದರು. ಭಕ್ತರು ಪಾಂಡುರಂಗನ ನಾಮಸ್ಮರಣೆ ಮಾಡಿ ಮಹಾಪ್ರಸಾದ ಸ್ವೀಕರಿಸಿದರು. ಗ್ರಾಮಸ್ಥರು ಈ ಸೇವಾ ಕಾರ್ಯವನ್ನು ಮೆಚ್ಚಿ, ಭಕ್ತಾದಿಗಳ ಏಕತೆಯು ಸಮಾಜಕ್ಕೆ ಮಾದರಿಯಾಗಿದೆ ಎಂದು ಅಭಿಪ್ರಾಯಪಟ್ಟರು.
ಶಿವಕುಮಾರ್–ಸಿದ್ದರಾಮಯ್ಯ ಚರ್ಚೆ; ಕರ್ನಾಟಕ ಸಂಪುಟ ವಿಸ್ತರಣೆ ಕುರಿತ ಊಹಾಪೋಹಗಳಿಗೆ ಮತ್ತಷ್ಟು ಬಲ
ಶ್ರೀವಾರಿ ದರ್ಶನ, ವಸತಿ ಹಾಗೂ ಸೇವೆಗಳ ಬುಕ್ಕಿಂಗ್ಗೆ ಅಧಿಕೃತ ಟಿಟಿಡಿ ವೆಬ್ಸೈಟ್ನ್ನೇ ಬಳಸುವಂತೆ ಭಕ್ತರಿಗೆ ಟಿಟಿಡಿ ಮನವಿ
ಗಿಲ್ ಗಾಯದ ಆತಂಕದ ನಡುವೆ ಭಾರತಕ್ಕೆ ಏಕದಿನ ಸರಣಿ ಗೆಲ್ಲುವ ಅವಕಾಶ
ಜಿಎಸ್ಟಿ ಇಳಿಕೆ, ಸುಲಭ ಹಣಕಾಸು ನೆರವಿನಿಂದ ಆಟೋ ಉದ್ಯಮದ ಪ್ರಮುಖ ವಿಭಾಗಗಳಲ್ಲಿ ದಾಖಲೆಯ ಮೊದಲ ತ್ರೈಮಾಸಿಕ ಮಾರಾಟ
ಬಿಗಿ ಭದ್ರತೆಯ ನಡುವೆ 6,200ಕ್ಕೂ ಹೆಚ್ಚು ಅಮರನಾಥ ಯಾತ್ರಿಕರು ಜಮ್ಮುವಿನಿಂದ ಪ್ರಯಾಣ ಬೆಳೆಸಿದರು
ಬೆಳಗಾವಿಯ ಜಿಮಖಾನಾ ಕ್ಲಬ್ನಲ್ಲಿ ಗುಂಡಿನ ದಾಳಿ; ವ್ಯಕ್ತಿ ಅದೃಷ್ಟವಶಾತ್ ಪಾರು 