ಶಿಲ್ಪಾ ಸಾವಿಗೆ ಕಾರಣವಾದ ವ್ಯಕ್ತಿ ಬಂಧಿಸಿ ಕಠಿಣ ಶಿಕ್ಷೆ ನೀಡಿ: ಬೊಮ್ಮಾಯಿ
Arrest and punish the person responsible for Shilpa's death: Bommai
ಶಿಲ್ಪಾ ಸಾವಿಗೆ ಕಾರಣವಾದ ವ್ಯಕ್ತಿ ಬಂಧಿಸಿ ಕಠಿಣ ಶಿಕ್ಷೆ ನೀಡಿ: ಬೊಮ್ಮಾಯಿ
ಶಿಗ್ಗಾವಿ 20 : ತಾಲೂಕಿನ ಚಿಕ್ಕ ಮಲ್ಲೂರು ಗ್ರಾಮದ ಶಿಲ್ಪಾ ಎನ್ನುವ ದಲಿತ ಯುವತಿ ಶಿಲ್ಪಾಗೆ ಕಿರುಕುಳ ನೀಡಿ ಆತ್ಮಹತ್ಯೆಗೆ ಕಾರಣವಾಗಿರುವ ಅನ್ಯಕೋಮಿನ ಯುವಕನನ್ನು ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು ಹಾಗೂ ಶಿಲ್ಪಾ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಈ ಕುರಿತು ಎಕ್ಸ್ ಮಾಡಿರುವ ಅವರು ಶಿಲ್ಪಾ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣದ ಹಿಂದೆ ಅನ್ಯ ಕೋಮಿನ ವ್ಯಕ್ತಿಯ ಕಿರುಕುಳವೇ ಕಾರಣ ಎನ್ನುವ ಸತ್ಯ ಹೊರಬಂದಿದೆ. ಉನ್ನತ ಶಿಕ್ಷಣ ಪಡೆದು ಬದುಕಿ ಬಾಳಬೇಕಾಗಿದ್ದ ವಿದ್ಯಾರ್ಥಿನಿ ತನಗೆ ಸಂಬಂಧವೇ ಇಲ್ಲದ ಪ್ರಕರಣದಲ್ಲಿ ಅನ್ಯ ಕೋಮಿನ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಜೀವಕಳೆದುಕೊಂಡಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಶಿಲ್ಪಾಳ ಆತ್ಮಹತ್ಯೆಯ ಹಿಂದಿನ ಸತ್ಯ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಮುಚ್ಚಿಹಾಕುವ ಅಥವಾ ಪ್ರಕರಣದ ದಿಕ್ಕು ತಪ್ಪಿಸುವ ಸಾಧ್ಯತೆ ಇದೆ. ಯುವತಿಗೆ ಕಿರುಕಳ ಕೊಟ್ಟು ಅವಳ ಸಾವಿಗೆ ಕಾರಣವಾಗಿರುವ ವ್ಯಕ್ತಿಯನ್ನು ಪೊಲೀಸರು ತಕ್ಷಣ ಬಂಧಿಸಿ ಕಠಿಣ ಶಿಕ್ಷೆ ಕೊಡಿಸಬೇಕು. ತನ್ನದಲ್ಲದ ತಪ್ಪಿಗೆ ಜೀವ ಕಳೆದುಕೊಂಡಿರುವ ಯುವತಿಯ ಕುಟುಂಬಕ್ಕೆ ರಾಜ್ಯ ಸರ್ಕಾರ 25 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 