ವಿಧ್ಯಾರ್ಥಿನಿ ಆತ್ಮಹತ್ಯೆಗೆ ಕಾರಣನಾದ ವ್ಯಕ್ತಿ ಬಂಧಿಸಿ, ಶಿಕ್ಷಿಸಿ
Arrest and punish the person who caused the student's suicide
ವಿಧ್ಯಾರ್ಥಿನಿ ಆತ್ಮಹತ್ಯೆಗೆ ಕಾರಣನಾದ ವ್ಯಕ್ತಿ ಬಂಧಿಸಿ, ಶಿಕ್ಷಿಸಿ
ಶಿಗ್ಗಾವಿ 20 : ಪಟ್ಟಣದ ಫರ್ನಿಚರ್ ಅಂಗಡಿಯ ಅನ್ಯಕೋಮಿನ ಮಾಲೀಕನ ಕಿರುಕುಳದಿಂದ ಬೆಳಗಾವಿಯ ಕಾಲೇಜೊಂದರಲ್ಲಿ ಬಿಸಿಎ ಓದುತ್ತಿದ್ದ ತಾಲೂಕಿನ ಚಿಕ್ಕಮಲ್ಲೂರ ಗ್ರಾಮದ ಶಿಲ್ಪಾ ಯರಮಸನಾಳ ಎಂಬ ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಇದಕ್ಕೆ ಕಾರಣನಾದವರ ವಿರುದ್ಧ ದೂರು ದಾಖಲಿಸಿ, ಬಂಧಿಸಬೇಕು ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಒತ್ತಾಯಿಸಿದರು. ತಾಲೂಕಿನ ಚಿಕ್ಕಮಲ್ಲೂರ ಗ್ರಾಮದಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಮನೆಗೆ ಭೇಟಿ ನೀಡಿ ಪಾಲಕರಿಗೆ ಸಾಂತ್ವನ ಹೇಳಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿದ್ಯಾರ್ಥಿನಿ ಶಿಲ್ಪಾ ಶಿಗ್ಗಾವಿಯ ನವೀನ್ ಎಂಬ ಯುವಕನನ್ನು ಪ್ರೀತಿಸುತ್ತಿದ್ದಳು. ನವೀನ್ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಮಾಲೀಕ ಸಂಬಳ ನೀಡದ ಕಾರಣದಿಂದ ತಾಯಿಯ ಚಿಕಿತ್ಸೆಗೆ ಹಣವಿಲ್ಲದೆ ಅಂಗಡಿಯಲ್ಲಿ ಕಳವು ಮಾಡಿದ್ದ. ಇದು ಗೊತ್ತಾಗಿ ಮಾಲೀಕನು ನವೀನ್ ಮೊಬೈಲ್ ಕಸಿದುಕೊಂಡಿದ್ದ. ಮೊಬೈಲ್ನಲ್ಲಿದ್ದ ಶಿಲ್ಪಾಳ ನಂಬರ್ ತೆಗೆದುಕೊಂಡು ಕರೆ ಮಾಡಿ ಕಿರುಕುಳ ಕೊಡುತ್ತಿದ್ದ. ಅಲ್ಲದೆ, ನವೀನ್ ಹಣ ಕಳವು ಮಾಡಿ ನಿನಗೆ ಕಳಿಸಿದ್ದಾನೆ. ಇದನ್ನು ಬಹಿರಂಗ ಮಾಡ್ತೀನಿ, ನಿಮ್ಮ ತಂದೆ-ತಾಯಿಗೂ ಹೇಳ್ತಿನಿ ಎಂದು ಶಿಲ್ಪಾಗೆ ಕರೆಮಾಡಿ ನಿರಂತರವಾಗಿ ಕಿರುಕುಳ ಕೊಟ್ಟಿದ್ದಾನೆ ಎಂದು ಆರೋಪಿಸಿದರು. ಅಮಾಯಕ ದಲಿತ ಯುವತಿ ಶಿಲ್ಪಾ ಆತ್ಮಹತ್ಯೆಗೆ ಕಾರಣನಾದ ಫರ್ನಿಚರ್ ಅಂಗಡಿ ಮಾಲೀಕನನ್ನು ಕೂಡಲೇ ಬಂಧಿಸಬೇಕು ಎಂದು ಆಗ್ರಹಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 