ದಕ್ಷಿಣ ಕಾಶ್ಮೀರದಲ್ಲಿ ಜೆಇಎಂಗೆ ಸಹಾಯ ಮಾಡುತ್ತಿದ್ದ ನಾಲ್ವರು ಸ್ಥಳೀಯ ಕಾರ್ಯಕರ್ತರ ಬಂಧನ
ಶ್ರೀನಗರ, ಫೆ.3 : ಜೈಷ್ -ಇ-ಮುಹಮ್ಮದ್ ಸಂಘಟನೆಗೆ ವಸತಿ ಮತ್ತಿತರ ಸೌಲಭ್ಯ ದೊರಕಿಸಿಕೊಡುತ್ತಿದ್ದ ಜೆಇಎಂ ಕಮಾಂಡರ್ ಸೇರಿ ನಾಲ್ವರು ಸ್ಥಳೀಯ ಕಾರ್ಯಕರ್ತರನ್ನು ದಕ್ಷಿಣ ಕಾಶ್ಮೀರ ಜಿಲ್ಲೆಯ ಪುಲ್ವಾಮದಲ್ಲಿ ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿಯ ಮೇರೆಗೆ ಪೊಲೀಸರು ಪುಲ್ವಾಮದ ಖ್ರೂ ಮತ್ತು ಅವಾಂತಿಪೊರದಲ್ಲಿ ದಾಳಿ ನಡೆಸಿ ನಾಲ್ವರು ಸ್ಥಳೀಯ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಖ್ರೂ ಎಂಬಲ್ಲಿಯ ನಿವಾಸಿಗಳಾದ ಮುಹಮ್ಮದ್ ಅಮೀನ್, ಮುಹಮ್ಮದ್ ರಫೀಕ್, ಫಯಾಝ್ ಲೋನ್ ಮತ್ತು ಅವಾಂತಿಪೊರದ ನಿವಾಸಿ ಮಕ್ಬೂಲ್ ದಾರ್ ಬಂಧಿತರು.
ಆರೋಪಿಗಳು ಅವಾಂತಿಪೊರ ಪ್ರದೇಶದಲ್ಲಿ ಜೆಇಎಂಗೆ ಸಹಾಯ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅವಾಂತಿಪೊರದಲ್ಲಿ ಇತ್ತೀಚೆಗೆ ನಡೆದ ಗುಂಡಿನ ಚಕಮಕಿಯಲ್ಲಿ ಜೆಇಎಂ ಕಮಾಂಡರ್ ಖಾರಿ ಯಾಸಿರ್ ಮತ್ತು ಆತನ ಸಹಚರರು ಹತರಾಗಿದ್ದರು.
"ಕಾನೂನಿನ ಸಂಬಂಧಿತ ವಿವಿಧ ಪ್ರಕರಣಗಳು ಆಯಾ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿವೆ ಮತ್ತು ಈ ವಿಷಯದಲ್ಲಿ ಹೆಚ್ಚಿನ ತನಿಖೆ ಪ್ರಗತಿಯಲ್ಲಿದೆ" ಎಂದು ಅವರು ಹೇಳಿದರು.
ಈ ಪ್ರದೇಶದಲ್ಲಿ ಉಗ್ರ ಸಂಬಂಧಿತ ಚಟುವಟಿಕೆಗಳನ್ನು ಬೆಂಬಲಿಸುವಲ್ಲಿ ಈ ನಾಲ್ಕು ಜನರ ಪಾತ್ರದ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 